More

    24ಕ್ಕೆ ಕೊಲ್ಲೂರು ದೇವಳ ದರ್ಶನ ನಿರ್ಬಂಧ

    ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.25ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಠಾನಗೊಳಿಸುವ ಸಲುವಾಗಿ ಅ.24ರಂದು (ಮಹಾನವಮಿ) ಸಾಯಂಕಾಲ 5 ಗಂಟೆಯಿಂದ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ.

    ಅಂದು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿ ಮಾತ್ರ ರಥೋತ್ಸವ ನೆರವೇರಿಸಲಿದ್ದಾರೆ. 25ರ ವಿಜಯದಶಮಿ ದಿನದಂದು ಬೆಳಗ್ಗೆ 4 ಗಂಟೆಯಿಂದ ವಿದ್ಯಾರಂಭ ಪ್ರಾರಂಭವಾಗಲಿದ್ದು, ವಿದ್ಯಾರಂಭಕ್ಕೆ ದಂಪತಿ ಸಮೇತ ಮಗುವಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts