ಗುಂಡ್ಲುಪೇಟೆ: ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಕೊಂಡೋತ್ಸವ ಭಾನುವಾರ ಸಂಪನ್ನಗೊಂಡಿತು.
ಶನಿವಾರ ರಾತ್ರಿ ಅಯ್ಯಪ್ಪಸ್ವಾಮಿಯ ಬೆಳ್ಳಿಯ ಮೂರ್ತಿಯನ್ನು ಸಾವಿರಾರು ವ್ರತಧಾರಿಗಳ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮುಂಜಾನೆ ಆಂಜನೇಯ ದೇವಾಲಯ ಆವರಣದಲ್ಲಿ ಸಿದ್ಧಪಡಿಸಿದ್ದ ಕೊಂಡವನ್ನು ಅಯ್ಯಪ್ಪ ವ್ರತಧಾರಿಗಳು ಹಾಯ್ದರು.