More

    ನಿಷ್ಠರವಾದಿ ನಿಜಶರಣ ಅಂಬಿಗರ ಚೌಡಯ್ಯ: ಕೊಪ್ಪಳ ಎಡಿಸಿ ಸಾವಿತ್ರಿ ಕಡಿ ಅಭಿಮತ

    ಕೊಪ್ಪಳ: ಸಮಾಜದಲ್ಲಿ ಮನೆ ಮಾಡಿದ್ದ ಅನಿಷ್ಟ ಸಂಪ್ರದಾಯಗಳನ್ನು ನಿಷ್ಠುರವಾಗಿ ಟೀಕಿಸಿದ ನಿಜಶರಣ ಅಂಬಿಗರ ಚೌಡಯ್ಯ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಹೇಳಿದರು.

    ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ ಶನಿವಾರ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಚನ ಸಾಹಿತ್ಯ ಸಮಾಜಕ್ಕೆ ಒಂದು ಅಭೂತಪೂರ್ವ ಕೊಡುಗೆ. 12ನೇ ಶತಮಾನ ಕ್ರಾಂತಿಯುಗ. ಬಸವಣ್ಣ ಹಾಗೂ ಇತರ ಶರಣರೆಲ್ಲರೂ ಸಮಾನತೆಯನ್ನು ಸಾರಿ, ಅದರ ಬೀಜ ಬಿತ್ತಿದರು. ಜಾತಿ, ವರ್ಣ, ಕುಲಗಳಿಗಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ಅನೇಕ ಶರಣರು ವಚನಗಳು ಹಾಗೂ ತಮ್ಮ ಬದುಕಿನ ಮೂಲಕ ಸಾರಿದರು. ಅಂತಹ ವಚನಕಾರರಲ್ಲಿ ನ್ಯಾಯ, ನಿಷ್ಠುರ, ದಿಟ್ಟ ನಿಲುವು ಹೊಂದಿದ್ದವರು ಚೌಡಯ್ಯನವರು. ಸಮಾಜದ ಅಂಕು-ಡೊಂಕುಗಳನ್ನು, ಅನಿಷ್ಟಗಳನ್ನು, ಮೂರ್ತಿ ಪೂಜೆ, ಜಾತಿ ಭೇದವನ್ನು ಖಂಡಿಸಿದ ಬಸವಣ್ಣನವರ ವಿಚಾರಗಳನ್ನು ತಮ್ಮ ವಚನಗಳ ಮೂಲಕ ನೇರ, ನಿಷ್ಠುರವಾಗಿ ತಿಳಿಸಿದವರು ಎಂದರು.

    ಗದಗ ಸನ್ಮಾರ್ಗ ಪಿಯು ಕಾಲೇಜು ಉಪನ್ಯಾಸಕ ಹೇಮಂತ ದಳವಾಯಿ ಮಾತನಾಡಿ, ಸಾಮಾನ್ಯ ಜನರು ಅರ್ಥ ಮಾಡಿಕೊಳ್ಳಬಹುದಾದ ಸರಳ ಪದಗಳಿಂದ ವಚನಗಳನ್ನು ರಚಿಸಿ, ದೇವವಾಣಿಯನ್ನು ಜನವಾಣಿಯನ್ನಾಗಿಸಿದ್ದು ಶರಣರು. 12ನೇ ಶತಮಾನ ಶರಣ ಸಾಹಿತ್ಯದ ಯುಗ. ಮನುಕುಲದ ಕಲ್ಯಾಣಕ್ಕಾಗಿ ದುಡಿಯುವವರೇ ಮಹಾತ್ಮರು. ಜಗತ್ತಿನ ಎಲ್ಲ ಸಮುದಾಯದ ಕಾಯಕ ಪವಿತ್ರವಾದುದು ಎಂದು ಸಾರಿ, ಸಮಾಜದ ಅಂಕು-ಡೊಂಕುಗಳನ್ನು ವಚನಗಳಿಂದ ಜಾಗೃತಿ ಮೂಡಿಸಿದವರು ಅಂಬಿಗರ ಚೌಡಯ್ಯ ಎಂದರು. ಕಾರ್ಯಕ್ರಮಕ್ಕೂ ಮುನ್ನ ನಗರಾದ್ಯಂತ ಚೌಡಯ್ಯ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ನಗರಸಭೆ ಸದಸ್ಯ ವಿರೂಪಾಕ್ಷಪ್ಪ ಮೊರನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮುದಾಯದ ಮುಖಂಡರಾದ ಯಮನಪ್ಪ ಕಬ್ಬೇರ, ಸೋಮಣ್ಣ ಬಾರಕೇರ, ಶಂಕರಗೌಡ ಮಾಲಿಪಾಟೀಲ್, ಯಂಕಪ್ಪ ಬಾರಕೇರ, ರಮೇಶ ಕಬ್ಬೇರ, ಹುಲಗಪ್ಪ ಬಾರಕೇರ, ರಾಜು ಕಲೆಗಾರ, ಗಂಗಾಧರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts