ಸಣ್ಣ ನೀರಾವರಿ ಇಲಾಖೆ ಸಾಮಗ್ರಿ ಜಪ್ತಿ

Koppal District Minor Irrigation Dept Furniture Confiscation Court order

ಕೊಪ್ಪಳ: ರೈತರ ಜಮೀನು ಸ್ವಾಧಿನ ಪಡಿಸಿಕೊಂಡು ಪರಿಹಾರ ನೀಡದ ಸಣ್ಣ ನೀರಾವರಿ ಇಲಾಖೆ ವಿರುದ್ಧ ಗರಂ ಆದ ನ್ಯಾಯಾಲಯ ಕಚೇರಿ ಪೀಠೋಪಕರಣ ಜಪ್ತಿಗೆ ಸೂಚಿಸಿದ ಕಾರಣ ಗುರುವಾರ ಅಧಿಕಾರಿಗಳು ಸಾಮಗ್ರಿಗಳನ್ನು ಕೊಂಡೊಯ್ದರು.

ಕುಕನೂರು ತಾಲೂಕಿನ ಡಿ.ಬಾಲಾಪುರ ಗ್ರಾಮದಲ್ಲಿ ಜಿನುಗು ಕೆರೆ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆ 2012ರಲ್ಲಿ 14 ರೈತರಿಂದ 26.5 ಎಕರೆ ಭೂಮಿ ಸ್ವಾಧಿನ ಮಾಡಿಕೊಂಡಿದೆ. ಆಗ ಎಕರೆಗೆ 46 ಸಾವಿರ ರೂ.ನಂತೆ ಪರಿಹಾರ ವಿತರಿಸಿದೆ. ಪರಿಹಾರ ಮೊತ್ತ ಕಡಿಮೆ ಆದ ಹಿನ್ನೆಲೆಯಲ್ಲಿ ಇಲಾಖೆ ನಡೆ ಪ್ರಶ್ನಿಸಿ ರೈತರು ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು.

2022ರಲ್ಲಿ ಎಕರೆಗೆ 3.5 ಲಕ್ಷ ರೂ. ಪರಿಹಾರ ಒದಗಿಸಲು ನ್ಯಾಯಾಲಯ ಸೂಚಿಸಿದೆ. ಈವರೆಗೂ ಪಾವತಿಸದ ಕಾರಣ ಕಚೇರಿ ಸಾಮಗ್ರಿ ಜಪ್ತಿ ಮಾಡುವಂತೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಈ ಬೆನ್ನಲ್ಲೇ ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿರುವ ಸಣ್ಣ ನೀರಾವರಿ ಕಚೇರಿಗೆ ಆಗಮಿಸಿದ ಅಧಿಕಾರಿಗಳು ಮೂರು ಲಾರಿಗಳಲ್ಲಿ ಪೀಠೋಪಕರಣಗಳನ್ನು ಕೊಂಡೊಯ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…