More

    ಅಧಿಕಾರ ದುರ್ಬಳಕೆ ಆರೋಪ: ಕೊಪ್ಪಳ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೇವೆಯಿಂದಲೇ ವಜಾ

    ಕೊಪ್ಪಳ: ಅಧಿಕಾರ ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ.

    ಕೆ.ಎಂ. ಸಿದ್ದೇಶ್ವರ ವಜಾಗೊಂಡ ಅಧಿಕಾರಿ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿ ರಾಜ್ಯ ಅಗ್ನಿಶಾಮಕದಳದ ಡಿಜಿಯಿಂದ ಆದೇಶ ಹೊರಡಿಸಲಾಗಿದೆ.

    ಇದನ್ನೂ ಓದಿ: ಪ್ರವೀರ್, ಐಶ್ವರ್ಯಾ ಎಂಗೇಜ್ಮೆಂಟ್ ; ‘ಸೈರನ್’ ಬಳಿಕ ನಿಶ್ಚಿತಾರ್ಥಕ್ಕೆ ರೆಡಿಯಾದ ಪ್ರವೀಣ್ ಶೆಟ್ಟಿ ಪುತ್ರ

    ಅಧಿಕಾರ ವ್ಯಾಪ್ತಿ ಮೀರಿ Fire ನೀರಪೇಕ್ಷಣಾ ಪತ್ರ ನೀಡುವುದು, ಹೊಸ ಕಟ್ಟಡಳು ಹಾಗೂ ಆಸ್ಪತ್ರೆಗಳಿಗೆ ಎನ್​ಒಸಿ ನೀಡುವುದು, ಸಾರ್ವಜನಿಕರಿಂದ ಅತಿಯಾದ ಲಂಚಕ್ಕೆ ಬೇಡಿಕೆ ಇಡುವುದು, ನೀರಪೇಕ್ಷಣಾ ಪ್ರಮಾಣ ಪತ್ರ ನೀಡಿ ಸರ್ಕಾರದ ಬೊಕ್ಕಸಕ್ಕೆ ಹಣ ಜಮಾ ಮಾಡದೆ ನಷ್ಟ ಉಂಟು ಮಾಡಿರುವ ಆರೋಪ ಕೆ.ಎಂ. ಸಿದ್ದೇಶ್ವರ ಅವರ ಮೇಲಿದೆ.

    ಮೇಲ್ನೋಟಕ್ಕೆ ತನಿಖೆಯಲ್ಲಿ ಆರೋಪಗಳು ಸಾಬೀತಾದ ಹಿನ್ನಲೆಯಲ್ಲಿ ಅಧಿಕಾರಿ ಕೆ.ಎಂ. ಸಿದ್ದೇಶ್ವರ ಅವರನ್ನು ಸೇವೆಯಿಂದಲೇ ವಜಾ ಮಾಡಿದ ಇಲಾಖೆ ಆದೇಶಿಸಿದೆ.

    ದೇಶೀಯ ಕ್ರಿಕೆಟ್ ಋತುವಿಗೆ ಮರುಚಾಲನೆ: ಇಂದಿನಿಂದ ಇರಾನಿ ಕಪ್ ಫೈಟ್

    ಫೈನಲ್‌ಗೇರಿ ಹೊಸ ಇತಿಹಾಸ ಬರೆದ ಬ್ಯಾಡ್ಮಿಂಟನ್ ತಂಡ: ಸೆಮಿಫೈನಲ್‌ನಲ್ಲಿ ಕೊರಿಯಾ ಎದುರು ರೋಚಕ ಗೆಲುವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts