More

    ಮನೆ ಮನೆಗೆ ಪಿಂಚಣಿ; ಕರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸೌಲಭ್ಯ

    ಕೊಪ್ಪಳ: ಕರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲಾಡಳಿತದಿಂದ ಮನೆ ಮನೆಗೆ ಪಿಂಚಣಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸಹಾಯಕ ಆಯುಕ್ತ ನಾರಾಯಣರಡ್ಡಿ ಮಂಗಳವಾರ ತಾಲೂಕಿನ ಹ್ಯಾಟಿ ಗ್ರಾಮಕ್ಕೆ ತೆರಳಿ ಫಲಾನುಭವಿಗಳಿಗೆ ಆದೇಶ ಪ್ರತಿ ವಿತರಿಸಿದರು.

    ಕರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ಸರ್ಕಾರ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದೆ. ಕೊಪ್ಪಳ ತಾಲೂಕಿನಲ್ಲಿ 82 ಅರ್ಹ ಕುಟುಂಬಗಳಿದ್ದು, ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ವಿಧವಾ ವೇತನ, ಅಂತ್ಯಸಂಸ್ಕಾರ ಯೋಜನೆ ಹಾಗೂ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸೌಲಭ್ಯ ಕಲ್ಪಿಸುವಂತೆ ಕಂದಾಯ ಅಧಿಕಾರಿಗಳು ಸೂಚಿಸಲಾಗಿದೆ ಎಂದರು. ತಹಸೀಲ್ದಾರ್ ಅಮರೇಶ ಬಿರಾದಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಲೆಕ್ಕಾಧಿಕಾರಿ ವಿಜಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts