ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ

koppal krishna jayanti celebration

ಕೊಪ್ಪಳ: ನಗರದ ಪ್ರಶಾಂತ ಬಡಾವಣೆಯ ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಸೋಮವಾರ ಶ್ರೀ ಕೃಷ್ಣಾಷ್ಟಮಿ ಆಚರಿಸಲಾಯಿತು. ಶ್ರೀಮದ್ಯೋಗಿಶ್ವರ ಯಾಜ್ಞವಲ್ಕ ಪ್ರತಿಷ್ಠಾನದಿಂದ ಮೂರು ದಿನ ಕಾರ್ಯಕ್ರಮ ಆಯೋಜಿಸಿದ್ದು, ಸೋಮವಾರ ಶ್ರೀ ಕೃಷ್ಣ ಮೂರ್ತಿಗೆ ಬೆಣ್ಣೆ ಅಲಂಕಾರ ಮಾಡಲಾಯಿತು. ಮಕ್ಕಳು ಕೃಷ್ಣ, ರಾಧೆ ಛದ್ಮವೇಷ ಧರಿಸಿ ಗಮನ ಸೆಳೆದರು. ಬೆಳಗ್ಗೆ ಸುಪ್ರಭಾತ, ಪಂಚಾಮೃತ, ಸಹಸ್ರನಾಮ ಪಾರಾಯಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ದೇವಾಲಯಕ್ಕೆ ವಿದ್ಯುತ್​ ದೀಪಗಳಿಂದ ಅಲಂಕಾರ ಮಾಡಿದ್ದು ಗಮನ ಸೆಳೆಯಿತು.

ಸಂಸದ ರಾಜಶೇಖರ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಲ್ಜದ್​ ಪಟೇಲ್​ ಸೇರಿ ಇತರ ಗಣ್ಯರನ್ನು ಸನ್ಮಾನಿಸಲಾಯಿತು. ಪಂಡಿತ್​ ರಘುಪ್ರೇಮಾಚಾರ್ಯ ಮುಳಗುಂದ ಅವರಿಂದ ಭಾಗವತ್​ ಪ್ರವಚನ ಹಾಗೂ ಸಂಜೆ ತೊಟ್ಟಿಲು ಸೇವೆ, ತಡರಾತ್ರಿ ಹರಕೆ ಬಿಡುವ ಸೇವೆ ನಡೆಯಿತು. ಇಂದು ಸುಪ್ರಭಾತ, ನಿಮಾರ್ಲ್ಯಾಭಿಷೇಕ, ತೊಟ್ಟಿಲು ಸೇವೆ, ಪಂಚಾಮೃತ ಅಭಿಷೇಕ, ನೈವೇದ್ಯ, ಮಹಾಮಂಗಳಾರತಿ, ತೀರ್ಥಪ್ರಸಾದ ಜರುಗಲಿದೆ. ಸಂಜೆ 4ಕ್ಕೆ ಪ್ರವಚನ, ಸೇವಾಕರ್ತರಿಗೆ ಫಲ ಮಂತ್ರಾಕ್ಷತೆ, ಗ್ರಾಮ ಪ್ರದಕ್ಷಿಣೆ, ಗೋಪಾಲ ಕಾವಲಿ, ಪಲ್ಲಕ್ಕಿ ಸೇವೆ ಇರಲಿದೆ.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…