More

    ಗಾಂಧಿ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ; ಸಂಸದ ಸಂಗಣ್ಣ ಕರಡಿ ಆರೋಪ


    ಕೊಪ್ಪಳ: ಮಹಾತ್ಮ ಗಾಂಧಿ ಹೆಸರು ಬಳಕೆ ಮಾಡಿಕೊಂಡು ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್, ಗಾಂಧಿ ತತ್ವಗಳನ್ನು ಮರೆತಿದೆ ಎಂದು ಸಂಸದ ಸಂಗಣ್ಣ ಕರಡಿ ದೂರಿದರು.

    ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹಾದುರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 7 ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್, ಗಾಂಧೀಜಿ ಹೆಸರು ಬಳಸಿಕೊಂಡಿದ್ದು ಬಿಟ್ಟರೆ, ಅವರ ತತ್ವ, ಸಿದ್ಧಾಂತ ಅನುಷ್ಠಾನಗೊಳಿಸಿಲ್ಲ. ಅಲ್ಪ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಖಾದಿ ಗ್ರಾಮೋದ್ಯೋಗಕ್ಕೆ ಉತ್ತೇಜನ ನೀಡಿದ್ದಾರೆ. ಲಾಲ್ ಬಹಾದುರ್ ಶಾಸ್ತ್ರಿ ಮೌಲ್ಯಗಳು ಮತ್ತು ತತ್ವಗಳು ದೇಶದ ಜನರಿಗೆ ಸ್ಫೂರ್ತಿಯ ಸೆಲೆಯಾಗಿವೆ ಎಂದರು.

    ವಿಭಾಗ ಸಹ ಪ್ರಭಾರಿ ಚಂದ್ರಶೇಖರಗೌಡ ಪಾಟೀಲ್ ಹಲಗೇರಿ, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ್, ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ, ಕೆಡಿಪಿ ಸದಸ್ಯ ಅಮರೇಶ ಕರಡಿ, ಸುನಿಲ್ ಹೆಸರೂರು, ರವಿಚಂದ್ರ ಮಾಲಿಪಾಟೀಲ್, ರಮೇಶ ಕವಲೂರ, ಅಮರೇಶ, ನಾಗರತ್ನಾ ಪಾಟೀಲ್, ಬಿ.ಗಿರೀಶಾನಂದ ಇತರರಿದ್ದರು.

    ಕಾಂಗ್ರೆಸ್ ಜಿಲ್ಲಾ ಕಚೇರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದುರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ನಗರಸಭೆ ಸದಸ್ಯ ಅಮ್ಜದ್ ಪಟೇಲ್ ಮಾತನಾಡಿ, ದೇಶದಕ್ಕೆ ಸ್ವಾತಂತ್ರೃ ಕೊಡಿಸುವಲ್ಲಿ ಗಾಂಧಿ ಪಾತ್ರ ಮುಖ್ಯವಾಗಿದೆ. ಅವರ ಸರಳತೆ, ಅಹಿಂಸೆ ಮಾರ್ಗಗಳು ನಮಗೆಲ್ಲ ಆದರ್ಶ. ಲಾಲ್ ಬಹಾದುರ್ ಶಾಸ್ತ್ರಿ ದೇಶ ಕಂಡ ಅಪರೂಪದ ಪ್ರಧಾನಿ. ಅವರ ಆಡಳಿತ ವೈಖರಿ, ಸರಳತೆ ಇಂದಿನ ರಾಜಕಾರಣಿಗಳಿಗೆ ಮಾದರಿ ಎಂದರು. ನಗರ ಬ್ಲಾಕ್ ಅಧ್ಯಕ್ಷ ಕಾಟನ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ನಗರಸಭೆ ಅಧ್ಯಕ್ಷೆ ಲತಾ ಚಿನ್ನೂರು, ಸದಸ್ಯರಾದ ಅಜೀಮ್ ಅತ್ತಾರ, ಬಸಯ್ಯ ಹಿರೇಮಠ, ಅಕ್ಬರ ಪಾಷಾ ಪಲ್ಟನ್, ಮುಖಂಡರಾದ ಕಿಶೋರಿ ಬೂದನೂರು, ನಿಂಗಪ್ಪ ಕಾಳೆ, ಗವಿಸಿದ್ದನಗೌಡ, ರವಿ ಕೊಪ್ಪಳ, ಶಂಕರ ಬಿಸರಳ್ಳಿ ಇತರರಿದ್ದರು.

    ಸರಳ ಆಚರಣೆ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಜಯಂತಿ ಸರಳವಾಗಿ ಆಚರಿಸಲಾಯಿತು. ಶಾಸಕ ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಗಾಂಧಿ ಮತ್ತು ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಜಿಪಂ ಸಿಇಒ ಫೌಜಿಯಾ ತರನ್ನುಮ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿಪಂ ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ವಾರ್ತಾ ಇಲಾಖೆಯ ಎಂ.ಅವಿನಾಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

    ಗಾಂಧಿ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ; ಸಂಸದ ಸಂಗಣ್ಣ ಕರಡಿ ಆರೋಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts