More

    ಹೀರೋ ಆದ ಸುನಾಮಿ ಕಿಟ್ಟಿ; ‘ಕೋರ’ ಚಿತ್ರದ ಟೀಸರ್​ ಬಿಡುಗಡೆ

    ಬೆಂಗಳೂರು: ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿದ್ದ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಲೇ ಇತ್ತು. ಈಗ ಅವರು ಕೊನೆಗೂ ‘ಕೋರ’ ಎಂಬ ಚಿತ್ರದಲ್ಲಿ ಹೀರೋ ಆಗಿದ್ದಾರೆ. ಈ ಹಿಂದೆ ‘ಒರಟ – ಐ ಲವ್ ಯೂ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಧ್ರುವ ಸರ್ಜಾ ಈ ಚಿತ್ರದ ಟೀಸರ್​ ಬಿಡುಗಡೆ ಮಾಡಿದ್ದಾರೆ.

    ಇದನ್ನೂ ಓದಿ: ಥಾಯ್ಲೆಂಡ್ ಪ್ರವಾಸದಲ್ಲಿ ಮೇಘನಾ; ಸದ್ದು ಮಾಡುತ್ತಿವೆ ಹಾಟ್ ಫೋಟೋಗಳು!

    ಹೀರೋ ಆದ ಸುನಾಮಿ ಕಿಟ್ಟಿ; 'ಕೋರ' ಚಿತ್ರದ ಟೀಸರ್​ ಬಿಡುಗಡೆ‘ಕೋರ’ ಚಿತ್ರದಲ್ಲಿ ಸುನಾಮಿ ಕಿಟ್ಟಿಗೆ ನಾಯಕಿಯಾಗಿ ಚರೀಷ್ಮಾ ನಟಿಸಿದ್ದಾರೆ. ಚಿತ್ರದ ನಿರ್ಮಾಪಕ ಪಿ. ಮೂರ್ತಿ ಖಳನಟನಾಗಿ ನಟಿಸಿದ್ದು, ಎಂ. ಕೆ ಮಠ, ಮುನಿರಾಜು, ಸೌಜನ್ಯ ಮುಂತಾದವರು ನಟಿಸಿದ್ದಾರೆ. ಇದೊಂದು ಆಕ್ಷನ್​ ಟೀಸರ್​ ಆಗಿದ್ದು, ನಾಯಕ ಮತ್ತು ಖಳನಾಯಕ ಇಬ್ಬರನ್ನೂ ಈ ಟೀಸರ್​ನಲ್ಲಿ ಪರಿಚಯಿಸಲಾಗಿದೆ.

    ಟೀಸರ್ ರಿಲೀಸ್ ಮಾಡಿ ಮಾತನಾಡಿದ ಧ್ರುವ ಸರ್ಜಾ, ‘ಶಶಾಂಕ್​ ಶೇಷಗಿರಿ ಬಹಳ ಚೆನ್ನಾಗಿ ಹಿನ್ನೆಲೆ ಸಂಗೀತವನ್ನು ಕಟ್ಟಿಕೊಟ್ಟಿದ್ದಾರೆ. ಸುನಾಮಿ ಕಿಟ್ಟಿ ಸಖತ್ ಆಗಿ ಸ್ಟಂಟ್ಸ್ ಮಾಡಿದ್ದಾರೆ. ಹಂಡ್ರೆಡ್ ಪರ್ಸೆಂಟ್ ಈ ಸಿನಿಮಾ ರಿಲೀಸ್ ಆದ ಮೇಲೆ ಜನಗಳು ಸುನಾಮಿ ತರ ಥಿಯೇಟರ್ ಗೆ ಬರ್ತಾರೆ. ಟೀಸರ್ ನಲ್ಲಿ ಪಾಸಿಟಿವ್ ವೈಬ್ಸ್ ಇದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದ್ದಾರೆ.

    ‘ಕೋರ’ ಚಿತ್ರದಲ್ಲಿ ಬುಡುಕಟ್ಟು ಜನಾಂಗದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಶ್ರೀ, ‘ಅವರಿಂದಲೇ ಇಂದು ಕಾಡು ಉಳಿದಿದೆ. ನಾವೆಲ್ಲರೂ ಬುಡಕಟ್ಟು ಜನಾಂಗದವರನ್ನು ಉಳಿಸೋ ಕೆಲಸ ಮಾಡಬೇಕಾಗಿದೆ. ಅವರ ಭಾವನೆಗಳು, ಆಚಾರ, ವಿಚಾರ, ನೋವು ಇದೆಲ್ಲವೂ ಸಿನಿಮಾದಲ್ಲಿದೆ. ತುಂಬಾ ದೊಡ್ಡ ಮಟ್ಟದಲ್ಲಿ ಕಟ್ಟಿಕೊಡಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗುತ್ತಿದೆ. ಬಹುತೇಕ ಶೂಟಿಂಗ್ ಮುಗಿದಿದ್ದು, ಎರಡು ಫೈಟಿಂಗ್ ಸೀನ್ ಬಾಕಿ ಇದೆ’ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಅವಳಿ ಮಕ್ಕಳಿಗೆ ಹೆಸರಿಟ್ಟ ಅಮೂಲ್ಯ-ಜಗದೀಶ್​; ಹೆಸರೇನು ಗೊತ್ತಾ?

    ರತ್ನಮ್ಮ ಮೂವೀಸ್ ಬ್ಯಾನರ್​ನಡಿ ಪಿ. ಮೂರ್ತಿ ‘ಕೋರ’ ಚಿತ್ರವನ್ನು ನಿರ್ಮಾಣ ಮಾಡಿದ್ದು, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ಹೇಮಂತ್ ಕುಮಾರ್ ಸಂಗೀತ ನಿರ್ದೆಶನ, ಸೆಲ್ವಂ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಕಲೇಶಪುರ, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಬೆಂಗಳೂರಿನಲ್ಲಿ ‘ಕೋರ’ ಸಿನಿಮಾ ಚಿತ್ರೀಕರಣ ಮಾಡಲಾಗಿದೆ.

    ಕೋಟಿ ದಾಟಿದ ವೀವ್ಸ್: ವಿಜಯಾನಂದ ಹಾಡಿಗೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts