ಬೆಂಗಳೂರು: ಬಿಜೆಪಿ ನಾಯಕರು ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಹೇಳಿಕೆಗಳು ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಮ್ಮ ಪಕ್ಷದಿಂದ ಯಾರೂ ಕಾಂಗ್ರೆಸ್ ಸೇರುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈ ಸರ್ಕಾರಕ್ಕೆ ಯಾವುದೇ ಆಪರೇಷನ್ ಬೇಕಿಲ್ಲ, ನ್ಯಾಚುರಲ್ ಡೆಲಿವರಿ ಆಗಲಿದೆ ಕಾಯಿರಿ: ಬಸನ್ಗೌಡ ಪಾಟೀಲ್ ಯತ್ನಾಳ್
ಇಂದು ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಸಚಿವ, “ಲೋಕಸಭಾ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಈ ಕಾರಣಕ್ಕೆ ರಾಜ್ಯಾದ್ಯಂತ ಪಕ್ಷ ಸಂಘಟನೆ ಮತ್ತು ಹೋರಾಟ ಮಾಡುತ್ತಿದೆ. ಜೆಡಿಎಸ್ ಮೈತ್ರಿ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಲಿದ್ದಾರೆ. ಅದು ನಮ್ಮ ವ್ಯಾಪ್ತಿಯಲ್ಲಿಲ್ಲ” ಎಂದು ಹೇಳಿದರು.
“ದೇವೇಗೌಡರು ಕೇಂದ್ರದ ನಾಯಕರು, ಈ ವಿಚಾರದ ಬಗ್ಗೆ ಅವರೇ ಚರ್ಚಿಸಲಿದ್ದಾರೆ. ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ದ,
ಕ್ಷೇತ್ರ ಹಂಚಿಕೆ ವಿಚಾರ ಹೈ ಕಮಾಂಡ್ ಅಂತಿಮ ಮಾಡಲಿದೆ. ಕಾಂಗ್ರೆಸ್ ಬಿಜಿಪಿಯಿಂದ ಕೆಲವರು ನಮ್ಮ ಪಕ್ಷ ಸೇರುತ್ತಾರೆ ಎಂಬ ಯೋಚನೆಯನ್ನು ಮಾಡುತ್ತಿದೆ. ಆದ್ರೆ, ಅವರಿಗೆ ತಿಳಿದಿರಲಿ, ಬಿಜೆಪಿಯಿಂದ ಯಾರು ಕಾಂಗ್ರೆಸ್ಗೆ ಹೋಗುವುದಿಲ್ಲ” ಎಂದು ಹೇಳಿದರು.
ಇದನ್ನೂ ಓದಿ: ಉಹಾಪೋಹ ಬೇಡ…ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
“ಪಕ್ಷ ಬಲಪಡಿಸುವ ಆಸೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ರೆ, ನಮ್ಮ ಪಕ್ಷದಿಂದ ಯಾವ ನಾಯಕರು ಕೂಡ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗುವುದಿಲ್ಲ. ಕಾಂಗ್ರೆಸ್ನ ಆಂತರಿಕ ವಿಚಾರದ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ” ಎಂದು ಹೇಳಿದರು.