ಪ್ರಧಾನಿ ಮೋದಿ ಭಾಷಣವನ್ನು ಟೀಕಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

blank

ಬೆಂಗಳೂರು: ದೇಶದಲ್ಲಿ ಕರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಜನತೆಗೆ ದೈರ್ಯ ತುಂಬಿದ್ದಾರೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ಪ್ರಸ್ತುತ ಬಿಕ್ಕಟ್ಟಿನ ಈ ಸಂದರ್ಭಕ್ಕೆ ಪ್ರಧಾನಿಯವರು ಯಾವುದೇ ಗಣನೀಯ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಆಕ್ಸಿಜನ್ ಕೊರತೆ, ಐಸಿಯು ಹಾಗೂ ಔಷಧಿ ಕೊರತೆ ಬಗ್ಗೆ ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸದಿರುವುದು ಆಶ್ಚರ್ಯ ಮೂಡಿಸಿದೆ. ದೇಶಕ್ಕೆ ಎದುರಾಗಿರುವ ಆಪತ್ತನ್ನು ಈ ಮೂಲಕ ಪ್ರಧಾನಿಯವರು ನಿರಾಕರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಅವರು ತಮ್ಮ ಭಾಷಣದಲ್ಲಿ ಮತ್ತೊಮ್ಮೆ ಲಾಕ್​ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮರೆಯದಿರೋಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ದೇಶ ಮತ್ತೊಂದು ದೊಡ್ಡ ಸಂಕಷ್ಟಕ್ಕೆ ತೆರೆದುಕೊಂಡಿದೆ. ಹಲವಾರು ಜನ ಜೀವ ಕಳೆದುಕೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.

ಮತ್ತೊಮ್ಮೆ ಲಾಕ್​ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಪ್ರಧಾನಿ ಮೋದಿ

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…