More

    VIDEO| ಇದು ಬಿಜೆಪಿಯ ಮಹಿಮೆ, ಮತದಾರರು ಎಚ್ಚರವಾಗಬೇಕು; ಕಾಂಗ್ರೆಸ್​ ವ್ಯಂಗ್ಯ

    ಬೆಂಗಳೂರು: ಮಂಗಳವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಬೆನ್ನಲ್ಲೇ ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹಾಲಿ ಶಾಸಕರು ಅಸಮಾಧಾನ ಹೊರಹಾಕಿದ್ದು ಬಂಡಾಯದ ಬಿಸಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೂ ತಟ್ಟಿದೆ.

    ನಿವೃತ್ತ ಐಪಿಎಸ್​ ಅಧಿಕಾರಿ ಭಾಸ್ಲರ್​ ರಾವ್​ ಅವರನ್ನು ಚಾಮರಾಜಪೇಟೆ ವಿಧಾನಸಬಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡುವ ಮೂಲಕ ಟೀಕಿಸಿದೆ.

    ಇದು ಬಿಜೆಪಿ ಮಹಿಮೆ

    ಮಾಜಿ ಪೊಲೀಸ್ ಕಮಿಷನರ್ ಒಬ್ಬರು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಒಬ್ಬನ ಮುಂದೆ ನಿಂತು ಕೈಮುಗಿದು ಬೆಂಬಲ ಕೋರುವುದು ಈ ವ್ಯವಸ್ಥೆಯ ದುರಂತ.

    ಇದು ಬಿಜೆಪಿಯ ಮಹಿಮೆ. ಈ ಚುನಾವಣೆಯಲ್ಲಿ ಬಿಜೆಪಿಯ ರೌಡಿ ಮೋರ್ಚಾ ಪ್ರಭಲವಾಗಿ ಕೆಲಸ ಮಾಡುತ್ತಿದೆ ಎಂದರೆ ಮುಂದೆ ಬಿಜೆಪಿ ಕ್ರಿಮಿನಲ್‌ಗಳ ಸಾಮ್ರಾಜ್ಯ ಸ್ಥಾಪಿಸುತ್ತದೆ ಎಂದೇ ಅರ್ಥ. ಮತದಾರರು ಎಚ್ಚರವಾಗಬೇಕು.

    ಬಿಜೆಪಿ ಕಚೇರಿ ಮೇಲೆ ದಾಳಿ

    ಇನ್ನು ಭಾಸ್ಕರ್​ ರಾವ್​ ಅವರನ್ನು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು ಕಾರ್ಯಕರ್ತರು ರಾಜ್ಯ ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts