More

    ಅಮಿತ್ ಷಾ ವಿರುದ್ಧ ಆಕ್ಷೇಪಾರ್ಹ ಬರಹ: ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಬಂಧನ

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಾಗಿ ಬರೆದುಕೊಂಡಿದ್ದ ಆರೋಪದಡಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್​ರನ್ನು ಬಂಧಿಸಲಾಗಿದೆ.

    ನಿನ್ನೆ(ಭಾನುವಾರ) ಅಮಿತ್ ಷಾ ಅವರಿಗೆ ಕರೊನಾ ದೃಢಪಟ್ಟ ಬೆನ್ನಲ್ಲೇ ಅವರ ಬಗ್ಗೆ ಆನಂದ್ ಪ್ರಸಾದ್ ತನ್ನ ಟ್ವಿಟರ್​ ಖಾತೆಯಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿದ್ದರು.

    ಇದನ್ನೂ ಓದಿರಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಕರೊನಾ ಸ್ಫೋಟ, 11 ಮಂದಿಗೆ ಸೋಂಕು ದೃಢ

    ಅಮಿತ್ ಷಾ ವಿರುದ್ಧ ಆಕ್ಷೇಪಾರ್ಹ ಬರಹ: ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಬಂಧನಅಮಿತ್​ ಷಾ ಬಗ್ಗೆ ಅವಹೇಳನಾಕಾರಿ ಬರಹ ಹಾಕಿದ್ದ ಹಿನ್ನೆಲೆಯಲ್ಲಿ ನಿನ್ನೆರಾತ್ರಿ ಆನಂದ್ ಪ್ರಸಾದ್​ರನ್ನು ಕೆ.ಆರ್.ಪುರಂನ ಅವರ ನಿವಾಸದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಸದ್ಯ ಟ್ವಿಟರ್​ನ ಬರಹ ಡಿಲೀಟ್ ಮಾಡಲಾಗಿದೆ.

    ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ತಿಥಿ ಕಾರ್ಯ ಮುಗಿದ ನಂತರ ಬಂತು ಶವ, ಕೋವಿಡ್​ ಆಸ್ಪತ್ರೆಯ ಮಹಾ ಯಡವಟ್ಟು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts