More

    17ರಂದು ಕುಲಾಲ ಸುಧಾರಕ ಸಂಘ ಕೃಷ್ಣವೇಷ, ಚಿತ್ರಕಲಾ ಸ್ಪರ್ಧೆ

    ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಸೆ.17ರಂದು ಬಿ.ಸಿ.ರೋಡಿನ ಪೊಸಳ್ಳಿಯ ಕುಲಾಲ ಸಮುದಾಯ ಭವನದಲ್ಲಿ ‘ಕೃಷ್ಣ ಕೃಷ್ಣ ಶ್ರೀಕೃಷ್ಣ’ ಕುಲಾಲ ಬಾಂಧವರ ಕೃಷ್ಣ ವೇಷ ಸ್ಪರ್ಧೆ, ನನ್ನ ಕನಸಿನ ಕೃಷ್ಣ- ಚಿತ್ರಕಲಾ ಸ್ಪರ್ಧೆ ಮತ್ತು ಕುಸಾಲ್ ಪಾತೆರದ ಬಿರ್ಸೆರ್-ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

    6 ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಿಗೆ ಮುದ್ದು ಕೃಷ್ಣ ವೇಷ, 5ರಿಂದ ಮೇಲ್ಪಟ್ಟು 10 ವರ್ಷದೊಳಗಿನ ಮಕ್ಕಳಿಗೆ ಬಾಲಕೃಷ್ಣ, ರಾಧಾಕೃಷ್ಣ ಮತ್ತು ಯಶೋದಾ ಕೃಷ್ಣ ಸ್ಪರ್ಧೆಗೆ ಯಾವುದೇ ವಯೋಮಿತಿ ಇರುವುದಿಲ್ಲ. ಚಿತ್ರಕಲೆಯಲ್ಲಿ ಕಿರಿಯ ಮತ್ತು ಹಿರಿಯ ವಿಭಾಗಗಳಿವೆ. ಕುಸಾಲ್ ಪಾತೆರದ ಬಿರ್ಸೆರ್ ಸ್ಪರ್ಧೆಯಲ್ಲಿ ಯಾವುದೇ ವಯೋಮಿತಿ ಇರುವುದಿಲ್ಲ. ಹಾಸ್ಯದಲ್ಲಿ ರಾಜಕೀಯ, ಜಾತಿನಿಂದನೆ ಮತ್ತು ಅಶ್ಲೀಲ ಮಾತುಗಳನ್ನು ಬಳಸುವಂತಿಲ್ಲ. ವೇದಿಕೆಯಲ್ಲಿ ಪ್ರದರ್ಶಿಸುವ ಹಾಸ್ಯದ ತುಣುಕನ್ನು ವಿಡಿಯೋ ಮಾಡಿ 9880836173ಕ್ಕೆ ಕಳುಹಿಸಬೇಕು. ಭಾಗವಹಿಸುವವರು ಸೆ.10ರೊಳಗೆ ತಮ್ಮ ಹೆಸರು ನೋಂದಾಯಿಸಬೇಕು.

    ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ತಾಲೂಕು ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸಲಿದ್ದಾರೆ. ನಿರಂತರ ಕಾರ್ಯಾಗಾರದ ಮೂರನೇ ಹಂತದ ಚೈತನ್ಯ 3.0 ಚಾಲನೆ ನೀಡಲಾಗುವುದು. ಬಳಿಕ ಸಾಂಸ್ಕೃತಿಕ ವೈಭವ, ಕಥಾರೂಪಕ ಪುಣ್ಯಕೋಟಿ ಮತ್ತು ಚಂದ್ರಯಾನ 3 ಕಾರ್ಯಕ್ರಮ ನಡೆಯಲಿದೆ ಎಂದು ಕುಲಾಲ ಸೇವಾದಳದ ದಳಪತಿ ರಾಜೇಶ್ ಕುಮಾರ್ ಎಚ್. ಮತ್ತು ಕಾರ್ಯದರ್ಶಿ ಜಯಂತ ಅಗ್ರಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts