ಮಂಡ್ಯ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿಗಳೆಲ್ಲ ಉಕ್ಕಿ ಹರಿಯುತ್ತಿರುವುದರಿಂದ ಜಲಾಯಶಗಳು ಬಹುತೇಕ ಭರ್ತಿಯಾಗಿವೆ. ಅದರಲ್ಲೂ ಕೆಆರ್ಎಸ್ ಜಲಾಶಯದಲ್ಲಿ ನೀರು ವರ್ಣರಂಜಿತವಾಗಿ ಭೋರ್ಗರೆದು ಹರಿಯುತ್ತಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಯಶಯಕ್ಕೆ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ನೀರನ್ನು ಗೇಟ್ಗಳನ್ನು ತೆರೆದು ಹೊರಬಿಡಲಾಗುತ್ತಿದೆ. ಪರಿಣಾಮವಾಗಿ ನೀರು ಕಲರ್ಫುಲ್ ಆಗಿ ಕಾಣಿಸುತ್ತಿದ್ದು, ನೋಡುಗರಿಗೆ ರಂಜನೆಯನ್ನು ನೀಡುತ್ತಿದೆ.
ಕೆಆರ್ಎಸ್ ಸದ್ಯ ಭರ್ತಿ ಹಂತಕ್ಕೆ ತಲುಪಿದ್ದು, ಡ್ಯಾಮ್ 42,633 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 124.80 ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಈಗಾಗಲೇ 123.10 ಅಡಿ ಭರ್ತಿಯಾಗಿರುವುದರಿಂದ 41000 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ: ಬೆಂಬಲದ ಕುರಿತು ಸದ್ಯಕ್ಕಿಷ್ಟೇ ತೀರ್ಮಾನ..