ಕಲಬುರ್ಗಿ: ಕಾಂಗ್ರೆಸ್ ಬಜರಂಗದಳ ಬ್ಯಾನ್ ಮಾಡುತ್ತೇವೆಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ, ದೇಶ ದ್ರೋಹಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಎಂದು ಟೀಕಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಕಾಂಗ್ರೆಸ್ ಪ್ರಣಾಳಿಕೆಗೆ ಬೆಂಕಿ ಇಟ್ಡು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆ ಪ್ರತಿಯನ್ನುಕೆ ಎಸ್ ಈಶ್ವರಪ್ಪ ಸುಟ್ಟು ಹಾಕಿದ್ದಾರೆ. ಬಜರಂಗದಳ ದಳ ಬ್ಯಾನ್ ಮಾಡ್ತಿನಿ ಅಂದಿದ್ದಕ್ಕೆ ಹಿಂದೂಗಳಿಗೆ ನೋವಾಗಿದೆ ಎಂದು ಹರಿಹಾಯ್ದರು.
ಕಾಂಗ್ರೆಸ್ನ ಮನಸ್ಥಿತಿ ರಾಜ್ಯದ ಜನರಿಗೆ ತಿಳಿದಿದೆ. ಎಲ್ಲಾ ಮುಸ್ಲಿಮರು ಒಂದೆ ಥರ ಅಲ್ಲ.. ಕೆಲ ಮುಸ್ಲಿಮರು ಕಾಂಗ್ರೆಸ್ನ ವಿರುದ್ಧವಾಗಿದ್ದಾರೆ. ಇದು ಮುಸ್ಲಿಂ ಲಿಗ್ನ ಪ್ರಣಾಳಿಕೆ/ಮಹ್ಮದ್ ಅಲಿ ಜಿನ್ನಾನ ಪ್ರಣಾಳಿಕೆಯಾಗಿದೆ. ಭಜರಂಗದಳ ಬ್ಯಾನ್ ಮಾಡಿ ಮುಸ್ಲಿಮರ ತುಷ್ಟಿಕರಣ ಮಾಡಲು ಕಾಂಗ್ರೆಸ್ ಹೊರಟಿದೆ. ಎಲ್ಲಾ ರಾಷ್ಟ್ರಭಕ್ತ ನಾಗರಿಕರು ರಾಷ್ಟ್ರದ್ರೋಹಿ ಪ್ರಣಾಳಿಕೆ ಬಹಿಷ್ಕರಿಸಲು ಮನವಿ ಮಾಡಿ ಕಾಂಗ್ರೆಸ್ ನಡೆ ವಿರುದ್ಧವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.