More

    ಕೆಎಸ್‌ಇ ಗೆಲ್ಲಿಸಿಯೇ ಹೊಸದುರ್ಗಕ್ಕೆ ಹೋಗೋದು: ಗೂಳಿಹಟ್ಟಿ ಶೇಖರ್

    ಶಿವಮೊಗ್ಗ: ನಾನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ಸಂಧಾನಕ್ಕೆ ಬಂದಿಲ್ಲ. ಬದಲಾಗಿ ಅವರಿಗೆ ಬೆಂಬಲ ನೀಡಲಿದ್ದೇನೆ. ಲೋಕಸಭೆ ಚುನಾವಣೆ ಮುಗಿಯುವವರೆಗೂ ಶಿವಮೊಗ್ಗ ಕ್ಷೇತ್ರದಲ್ಲೇ ಇದ್ದು ಅವರ ಪರ ಪ್ರಚಾರ ನಡೆಸಿ ಅವರನ್ನು ಗೆಲ್ಲಿಸಿಯೇ ಹೊಸದುರ್ಗಕ್ಕೆ ಹೋಗುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಹೇಳಿದರು.

    ಮಲ್ಲೇಶ್ವರ ನಗರದ ಈಶ್ವರಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಸಮಾಲೋಚನೆ ನಡೆಸಿದ ಅವರು, ಈಶ್ವರಪ್ಪ ಪ್ರಖರ ಹಿಂದುತ್ವವಾದಿ. ಹಿಂದು ಹುಲಿಯಂತಿರುವ ಅವರನ್ನು ಬೆಂಬಲಿಸಲಿದ್ದೇನೆ. ಪಕ್ಷ ಶುದ್ಧೀಕರಣ ಆಗಬೇಕೆಂದು ಧ್ವನಿ ಎತ್ತಿರುವ ಅವರಿಗೆ ಕೈಜೋಡಿಸುತ್ತೇನೆ ಎಂದರು.
    ಬಿಜೆಪಿಯಲ್ಲಿ ಹಿಂದುತ್ವವಾದಿಗಳನ್ನು ತುಳಿಯುವ ಕೆಲಸ ಆಗುತ್ತಿದೆ. ಈಶ್ವರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಆದರೆ ಇದೀಗ ಒಂದು ಕುಟುಂಬದ ಕೈಯಲ್ಲಿದೆ. ಆರಂಭದಲ್ಲಿ ವಿಧಾನಸಭೆ ಟಿಕೆಟ್ ತಪ್ಪಿಸಿದರು. ಈಗ ಅವರ ಪುತ್ರ ಕೆ.ಇ.ಕಾಂತೇಶ್‌ಗೆ ಹಾವೇರಿ ಲೋಕಸಭೆ ಟಿಕೆಟ್ ತಪ್ಪಿಸಲಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಧ್ವನಿ ಎತ್ತಿದ ಸಂಸದರಾದ ಡಿ.ವಿ.ಸದಾನಂದ ಗೌಡ, ಪ್ರತಾಪ್ ಸಿಂಹ, ಮಾಜಿ ಸಚಿವ ಸಿ.ಟಿ.ರವಿ ಅವರನ್ನು ತುಳಿಯಲಾಗುತ್ತಿದೆ ಎಂದು ಕಿಡಿಕಾರಿದರು.
    ಯಡಿಯೂರಪ್ಪ ಅವರು ಹಿಂದುತ್ವವಾದಿಯಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ಅವರನ್ನೇ ಕೇಳಬೇಕು. ಹಿಂದುತ್ವವಾದಿಯಾಗಿದ್ದರೆ ಹಿಂದು ಹುಲಿಗಳನ್ನು ತುಳಿಯುತ್ತಿರುವುದೇಕೆ ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts