More

    ಕೆಎಸ್‌ಆರ್‌ಪಿ ನಿರ್ಗಮನ ಪಥ ಸಂಚಲನ

    ಬೆಳಗಾವಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 6ನೇ ತಂಡದ ಪುರುಷ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಡಿ. 1ರಂದು ಬೆಳಗ್ಗೆ 9ಕ್ಕೆ ಎಪಿಎಂಸಿ ರಸ್ತೆ ಮಾರ್ಗದಲ್ಲಿರುವ ಕೆಎಸ್‌ಆರ್‌ಪಿ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೆಎಸ್‌ಆರ್‌ಪಿ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್ ತಿಳಿಸಿದರು.

    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕಕುಮಾರ್, ವಿವಿಧ ಪಡೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಪಾಲ್ಗೊಳ್ಳುವರು. ಒಟ್ಟು 187 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಡೆಯಲಿದೆ ಎಂದು ತಿಳಿಸಿದರು.

    ಸೈಕಲ್ ಜಾಥಾ: ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಉತ್ಸವ ಹಮ್ಮಿಕೊಳ್ಳಲಾಗಿದೆ. ತನ್ನಿಮಿತ್ತ 2ನೇ ಪಡೆ ಮಚ್ಚೆ ಘಟಕದಿಂದ ಡಿ. 1ರಂದು ಸಂಜೆ 7ರಿಂದ ರಾತ್ರಿ 9ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂಬಡ್ತಿ ಪಡೆದ 50 ಮಂದಿ ಆರ್‌ಎಚ್‌ಸಿಗಳಿಗೆ ವೃತ್ತಿ ಕೌಶಲ ಅಭಿವೃದ್ಧಿಗಾಗಿ ಪುನರ್ಮನನ ತರಬೇತಿ ಹಮ್ಮಿಕೊಳ್ಳಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕಕುಮಾರ್ ಪಾಲ್ಗೊಳ್ಳಲಿದ್ದಾರೆ. ಡಿ. 2ರಂದು ಬೆಳಗ್ಗೆ 7ಕ್ಕೆ ಎಡಿಜಿಪಿ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದಿಂದ ಮಚ್ಛೆವರೆಗೆ ಸೈಕಲ್ ಜಾಥಾ ಆಯೋಜಿಸಲಾಗಿದೆ. ಸಾರ್ವಜನಿಕರು ಸೇರಿ 400 ಮಂದಿ ಪಾಲ್ಗೊಳ್ಳಲಿದ್ದಾರೆ. ‘ಸದೃಢ ಹಾಗೂ ಆರೋಗ್ಯಕರ ಬೆಳಗಾವಿಗಾಗಿ’ ಶೀರ್ಷಿಕೆಯಲ್ಲಿ ಜಾಥಾ ನಡೆಸಲಾಗುತ್ತಿದೆ. ಈ ಜಾಥಾಕ್ಕೆ ಎಜುಕೇಷನ್ ಇಂಡಿಯಾ ಸಂಸ್ಥೆ ಸಹಯೋಗ ನೀಡಿದೆ ಎಂದು ತಿಳಿಸಿದರು. ಸಹಾಯಕ ಕಮಾಂಡೆಂಟ್ ನಾಗೇಶ ಯಡಾಳ ಹಾಗೂ ಪ್ರಶಾಂತ ಕುಂದರಗಿ ಸುದ್ದಿಗೋಷ್ಠಿಯಲ್ಲಿದ್ದರು.

    ಪ್ಲಾಸ್ಮಾ ದಾನಕ್ಕೆ 45 ಸಿಬ್ಬಂದಿ ಸಿದ್ಧ

    ಕರೊನಾ ಭೀತಿ ನಡುವೆಯೂ ಪಡೆಯಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದೇವೆ. 70 ಮಂದಿ ಅಧಿಕಾರಿ/ಸಿಬ್ಬಂದಿಗೆ ಕರೊನಾ ದೃಢಪಟ್ಟಿತ್ತು. ಅದರಲ್ಲಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರ ಪತ್ನಿಗೆ ಸರ್ಕಾರದಿಂದ 30 ಲಕ್ಷ ರೂ. ಪರಿಹಾರ ಮಂಜೂರಾಗಿದೆ. ಕರೊನಾದಿಂದ ಗುಣಮುಖರಾದ ಬಳಿಕ ಅಸ್ಲಂ ಫಣಿಬಂಧ, ಆರ್‌ಎಚ್‌ಸಿ ಎ.ಎಸ್. ಮುತಾಲಿಕ್ ಅವರ ತಂದೆ ಸುರೇಶ ಮುತಾಲಿಕ್ ಅವರಿಗೆ ಪ್ಲಾಸ್ಮಾ ದಾನ ಮಾಡಿದ್ದಾರೆ. ಬೆಳಗಾವಿ ಘಟಕವೊಂದರಲ್ಲೇ 45 ಮಂದಿ ಪ್ಲಾಸ್ಮಾ ದಾನಕ್ಕೆ ಸಿದ್ಧವಿದ್ದಾರೆ ಎಂದು ಹಂಜಾ ಹುಸೇನ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts