ಬೆಂಗಳೂರು: ಮಹಾಮಾರಿ ಕರೊನಾ ವೈರಸ್ಗೆ ಹೆದರಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿವಿ ರಾಮನ್ ನಗರದಲ್ಲಿ ನಡೆದಿದೆ.
ಪೊಲೀಸ್ ಇಲಾಖೆಯಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ಮಾಡಲು ಇಲಾಖೆ ನಿರ್ಧರಿಸಿ, ಅದಂರಂತೆ ಪರೀಕ್ಷೆ ಮಾಡಲಾಗಿತ್ತು. 50 ವರ್ಷದ ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಅವರಿಗೆ ನಿನ್ನೆ ಸಂಜೆಯಷ್ಟೇ ಕರೊನಾ ಪಾಸಿಟಿವ್ ಬಂದಿತ್ತು. ಇದನ್ನೂ ಓದಿ: ಸಚಿವ ಸುಧಾಕರ್ ತಂದೆಗೆ ಕರೊನಾ ಸೋಂಕು ಬೆನ್ನಲ್ಲೇ ಪತ್ನಿ, ಮಗಳಿಗೂ ಮಹಾಮಾರಿ ಕಂಟಕ
ಈ ಬಗ್ಗೆ ಅವರಿಗೆ ಮಾಹಿತಿ ನೀಡಿ ಇಂದು ಸಿವಿ ರಾಮನ್ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಾಗಿ ವಿಷಯ ತಿಳಿಸಿದ್ದರು. ಆದರೆ, ಕರೊನಾಗೆ ಹೆದರಿದ ಪೇದೆ ಕೆಎಸ್ಆರ್ಪಿ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಪತ್ನಿ ಹತ್ಯೆಗೈದು ವಿಮಾನದಲ್ಲಿ ಕೋಲ್ಕತಗೆ ತೆರಳಿ ಅತ್ತೆಯನ್ನು ಕೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?