ಚಾಮರಾಜನಗರ: ಮೊನ್ನೆಮೊನ್ನೆಯಷ್ಟೇ ಅಪ್ಪ-ಮಗ ಹಾಗೂ ಅಂಗವಿಕಲೆಯೊಬ್ಬಳನ್ನು ಬಲಿ ತೆಗೆದುಕೊಂಡಿದ್ದ ಕೆಎಸ್ಆರ್ಟಿಸಿ, ಇಂದು ಒಂದೇ ಕುಟುಂಬದ ಮೂವರನ್ನು ಬಲಿ ಪಡೆದಿದೆ.
ತಾಲೂಕಿನ ಮರಿಯಾಲ ಬಳಿಯ ಚಾಮರಾಜನಗರ- ಮೈಸೂರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕಟುಂಬದ ಮೂವರು ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಗಂಡ-ಹೆಂಡತಿ ಮತ್ತು ಮಗ.
ಇದನ್ನೂ ಓದಿ: ಭೀಕರ ಅಪಘಾತ, ಕೆಎಸ್ಆರ್ಟಿಸಿಗೆ ಒಟ್ಟು ಮೂವರು ಬಲಿ: 7 ವರ್ಷದ ಬಾಲಕ, ಆತನ ಅಪ್ಪ, 17 ವರ್ಷದ ಅಂಗವಿಕಲೆ ಸ್ಥಳದಲ್ಲೇ ಸಾವು
ಮೈಸೂರಿನಿಂದ ಚಾಮರಾಜನಗರ ಕಡೆಗೆ ಬರುತ್ತಿದ್ದ ಬಸ್ ಮರಿಯಾದ ಬಳಿ ಇರುವ ರೈಲ್ವೆ ಸೇತುವೆ ಮೇಲೆ ಬರುತ್ತಿರುವಾಗ ಚಾಮರಾಜನಗರ ಕಡೆಯಿಂದ ಮರಿಯಾಲ ಕಡೆಗೆ ತೆರಳುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮೂವರು ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದರು.
ಇದನ್ನೂ ಓದಿ: ಕಾರು-ಟ್ರ್ಯಾಕ್ಟರ್ ಭೀಕರ ಅಪಘಾತ: ತಾಯಿ, ಮಗ, 6 ವರ್ಷದ ಮೊಮ್ಮಗು ಸ್ಥಳದಲ್ಲೇ ಸಾವು, ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ…
ಮೃತರು ಚಾಮರಾಜನಗರ ಪಟ್ಟಣದ ಚನ್ನೀಪುರಮೋಳೆ ಬಡಾವಣೆಯ ಅಶೋಕ್, ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. ಪೊಲೀಸರು ಗುರುತು ಪತ್ತೆಯಲ್ಲಿ ತೊಡಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.