ಕೆಎಸ್ಸಾರ್ಟಿಸಿ ಬಸ್ ಟಯರ್ ಪಂಕ್ಚರ್

blank

ಹನೂರು: ತಾಲೂಕಿನ ಕಾಡಂಚಿನ ಗ್ರಾಮ ಪೊನ್ನಾಚಿಯಲ್ಲಿ ಗುರುವಾರ ಕೆಎಸ್ಸಾರ್ಟಿಸಿ ಬಸ್ ಟಯರ್ ಪಂಕ್ಚರ್ ಆದ ಪರಿಣಾಮ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಪೊನ್ನಾಚಿ ಭಾಗವು ಕಾಡಂಚಿನಿಂದ ಕೂಡಿದ್ದು, ಮರೂರು, ಅಸ್ತೂರು ಇನ್ನಿತರ ಗ್ರಾಮಗಳಿವೆ. ಈ ಮಾರ್ಗಕ್ಕೆ ಸಾರಿಗೆ ಬಸ್ ಸೌಕರ್ಯವನ್ನು ಒದಗಿಸಲಾಗಿದೆ. ಆದರೆ ಸಂಚರಿಸುವ ಬಸ್ ಸುಸ್ಥಿತಿಯಲ್ಲಿಲ್ಲ. ಹಾಗಾಗಿ ಕಳೆದ ಒಂದೂವರೆ ತಿಂಗಳಿನಿಂದ ಆಗಾಗ್ಗೆ ಮಾರ್ಗಮಧ್ಯದಲ್ಲಿ ಕೆಟ್ಟು ನಿಲ್ಲುತ್ತಿದೆ. ಇಲ್ಲವೇ ಪಂಕ್ಚರ್ ಆಗುತ್ತಿದೆ. ಅದರಂತೆಯೇ ಬೆಳಗ್ಗೆ 10.45ರಲ್ಲಿ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳಬೇಕಿದ್ದ ಸಾರಿಗೆ ಬಸ್ ಪಂಕ್ಚರ್ ಆಗಿದೆ. ಮತ್ತೊಂದು ಟಯರ್ ಇಲ್ಲದ ಪರಿಣಾಮ ಮಧ್ಯಾಹ್ನದತನಕ ಬಸ್ ಗ್ರಾಮದಲ್ಲಿಯೇ ನಿಲ್ಲುವಂತಾಯಿತು. ಇದರಿಂದ ಕೆಲಸ-ಕಾರ್ಯಗಳ ನಿಮಿತ್ತ ಹನೂರು, ಕೊಳ್ಳೇಗಾಲ ಇನ್ನಿತರ ಕಡೆಗಳಿಗೆ ತೆರಳುವ ಜನರು ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೇ ಕಾದುನಿಂತು ಆಗಮಿಸಿದ ಖಾಸಗಿ ಬಸ್‌ನಲ್ಲಿ ತೆರಳಿದರೆ, ಇನ್ನು ಕೆಲವರು ಆಟೋಗಳ ಮೂಲಕ ತೆರಳುವಂತಾಯಿತು.

ಈ ಭಾಗಕ್ಕೆ ಸುಸ್ಥಿತಿಯಲ್ಲಿರುವ ಬಸ್ ಬಿಡುವಂತೆ ಕಳೆದ ಒಂದು ತಿಂಗಳ ಹಿಂದೆ ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಜತೆಗೆ ಶಾಸಕರ ಗಮನಕ್ಕೂ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ಸುಸ್ಥಿತಿಯಲ್ಲಿರುವ ಬಸ್ ಬಿಡುವುದರ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸುವುದಾಗಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಪೊನ್ನಾಚಿ ರಾಜು ಎಚ್ಚರಿಸಿದ್ದಾರೆ.

blank

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…