More

    ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಸಂದೇಶ; ಕೆಎಸ್​ಆರ್​ಟಿಸಿ ನೀಡಿದ ಸ್ಪಷ್ಟನೆ ಹೀಗಿದೆ…

    ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬಕ್ಕೆ ಶುಭಾಶಯ ಕೋರಿ ಸಂದೇಶ ಮುದ್ರಿಸುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಡವಟ್ಟು ಮಾಡಿಕೊಂಡಿತ್ತು. ಟಿಕೆಟ್​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ನಿಗಮ, ಮುದ್ರಿತ ಸಂದೇಶ ತೆಗೆದು ಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

    ಟಿಕೆಟ್​ನಲ್ಲಿ ಕ್ರಿಸ್​ಮಸ್​ ಹಬ್ಬದ ಶುಭಾಶಯ ತಿಳಿಸುವ ಸಂದೇಶ ಪ್ರಿಂಟ್​ ಆಗಿರುವ ಬಗ್ಗೆ ಕೆಎಸ್​ಆರ್​ಟಿಸಿ ವಿರುದ್ಧ ಸಾಕಷ್ಟು ಮಂದಿ ಕಿಡಿಕಾರಿದ್ದರು. ಹಿಂದು ಧರ್ಮದ ಹಬ್ಬಗಳಿಗೆ ಈವರೆಗೆ ಯಾಕೆ ಶುಭಾಶಯ ಸಂದೇಶ ಟಿಕೆಟ್​ನಲ್ಲಿ ಮುದ್ರಿಸಿಲ್ಲ? ಎಂದು ಪ್ರಶ್ನಸಿದ್ದರು.

    ಕೆಎಸ್​ಆರ್​ಟಿಸಿ ನಿಗಮದ ಒಟ್ಟು 83 ಟಕಗಳಲ್ಲಿ 16 ವಿಭಾಗಗಳಿದ್ದು, ನಿತ್ಯ 10,200 ಇಟಿಎಂ(ಇಲೆಕ್ಟ್ರಿಕ್​ ಟಿಕೆಟ್​ ಮೆಶಿನ್​)ಗಳಲ್ಲಿ ಮುದ್ರಿತ ಮಾಹಿತಿಯನ್ನು ಅಪ್ಲೋಡ್​ ಮಾಡಲಾಗುತ್ತದೆ. ಟಿಕೆಟ್​ ವಿತರಣಾ ಯಂತ್ರಗಳ ಮೂಲಕ ಹಬ್ಬ ಹರಿದಿನಗಳು, ರಾಷ್ಟ್ರೀಯ ಹಬ್ಬ ಹಾಗೂ ಇತರ ರಜಾ ದಿನಗಳ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಬಹುದಾಗಿದೆ. ಈ ವ್ಯವಸ್ಥೆಯನ್ನು ಟಕಗಳಲ್ಲಿ ಆಂತರಿಕ ಬಳಕೆಗಾಗಿ ಮಾತ್ರ ಕಲ್ಪಿಸಲಾಗಿದೆ.

    ವೈರಲ್​ ಆಗಿರುವ ಟಿಕೆಟ್​ನಲ್ಲಿ ದಾಖಲಾಗಿರುವ ಕ್ರಿಸ್​ಮಸ್​ ಹಬ್ಬದ ಸಂದೇಶ ಡಿ.25ರಂದು ಮಾತ್ರ ಮುದ್ರಿತವಾಗಿದೆ. ಇದು ಚಿಕ್ಕಬಳ್ಳಾಪುರ ವಿಭಾಗದ, ಚಿಕ್ಕಬಳ್ಳಾಪುರ, ಶಿಡ್ಲಟ್ಟ ಮತ್ತು ಚಿಂತಾಮಣಿ ಟಕದ ಟಿಕೆಟ್​ಗಳಲ್ಲಿ ಮಾತ್ರ ಮುದ್ರಿತವಾಗಿದೆ. ಇದನ್ನು ಈಗಾಗಲೇ ಸರಿಪಡಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ಸ್ಪಷ್ಟನೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts