More

    412 ನೌಕರರ ವರ್ಗಾವಣೆ ರದ್ದು ರಾಜ್ಯ ರಸ್ತೆ ಸಾರಿಗೆ ಇಲಾಖೆ ಆದೇಶ

    ಬೆಂಗಳೂರು: ಕೋರಿಕೆ ಮೇರೆಗೆ 412 ನೌಕರರ ಅಂತರ್ ನಿಗಮ ವರ್ಗಾವಣೆ ರದ್ದು ಮಾಡಿ ರಾಜ್ಯ ರಸ್ತೆ ಸಾರಿಗೆ ಇಲಾಖೆ ಆದೇಶಿಸಿದೆ.

    ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಯಲ್ಲಿ ಉತ್ತರ ಕರ್ನಾಟಕದ ಸಾವಿರಾರು ನೌಕರರು ಕೆಲಸ ಮಾಡುತ್ತಿದ್ದು, ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಥವಾ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ವರ್ಗಾವಣೆ ಮಾಡಲು ಅನುಕೂಲವಾಗು ವಂತೆ 4 ವರ್ಷಗಳ ಹಿಂದೆ ಅಂತರ್ ನಿಗಮ ವರ್ಗಾವಣೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಹೀಗೆ ವರ್ಗಾವಣೆಯಾದವರಲ್ಲಿ 412 ನೌಕರರ ವರ್ಗಾವಣೆಯನ್ನು ಕೋರಿಕೆ ಮೇರೆಗೆ ರದ್ದು ಮಾಡಲಾಗಿದೆ.

    ನಾಲ್ಕು ನಿಗಮಗಳಿಂದ 18 ಸಾವಿರ ನೌಕರರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 4 ಸಾವಿರ ನೌಕರರ ಅರ್ಜಿ ತಿರಸ್ಕರಿಸಲಾಗಿತ್ತು. ಉಳಿದ 14 ಸಾವಿರ ನೌಕರರ ಪೈಕಿ 3,589 ನೌಕರರನ್ನು ವರ್ಗಾವಣೆ ಮಾಡಲಾಗಿದ್ದು, ಅದರಲ್ಲಿ 412 ನೌಕರರು ವರ್ಗಾವಣೆ ರದ್ದು ಕೋರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts