More

    ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಆಗ್ರಹ

    ಶಿವಮೊಗ್ಗ: ಭದ್ರಾವತಿಯಿಂದ ಶಿವಮೊಗ್ಗಕ್ಕೆ ಆಗಮಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಮಲವಗೊಪ್ಪದಲ್ಲಿ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಕೆಲ ಸಮಯ ಬಸ್ ತಡೆದು ಪ್ರತಿಭಟಿಸಿದರು
    ಮಲವಗೊಪ್ಪ, ನಿಧಿಗೆ ಭಾಗದ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ, ಕಾಲೇಜಿಗೆಂದು ಶಿವಮೊಗ್ಗಕ್ಕೆ ಹೋಗುತ್ತಾರೆ. ಕೆಲಸಕ್ಕೆಂದು ಅನೇಕರು ಶಿವಮೊಗ್ಗಕ್ಕೆ ತೆರಳಬೇಕಾಗುತ್ತದೆ. ಶಿವಮೊಗ್ಗ-ಭದ್ರಾವತಿ ನಗರದ ಮಧ್ಯೆ ಸಂಚರಿಸುವ ಕೆಎಸ್‌ಆರ್‌ಟಿಸಿ ನಿದಿಗೆ, ಮಲವಗೊಪ್ಪಕ್ಕೆ ಬರುವ ವೇಳೆಗಾಗಲೇ ಸಂಪೂರ್ಣ ಭರ್ತಿಯಾಗಿರುತ್ತವೆ. ಹೀಗಾಗಿ ನಿದಿಗೆ-ಮಲವಗೊಪ್ಪದಲ್ಲಿ ನಿಲ್ಲಿಸುವುದೇ ಇಲ್ಲ. ಒಂದು ಬಸ್ ನಿಂತರೂ ವಿದ್ಯಾರ್ಥಿಗಳು ಹರಸಾಹಸಪಟ್ಟು ಪ್ರಯಾಣಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸ್ಥಳಕ್ಕಾಗಮಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಸ್ಥಳೀಯರಾದ ಶಶಿಕುಮಾರ್, ಸಂತೋಷ್, ಸತೀಶ್, ಗಿರೀಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts