More

    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪಿಂಕ್ ಕೊಠಡಿ

    ತುಮಕೂರು: ಶಕ್ತಿ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ವಿಶ್ರಾಂತಿಗಾಗಿ ತೆರೆದಿರುವ ‘ಪಿಂಕ್’ ಕೊಠಡಿಯನ್ನು ತುಮಕೂರು ಸಾರಿಗೆ ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು.

    ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚು ಕೊಡುವ ನಿಟ್ಟಿನಲ್ಲಿ ವಿಶ್ರಾಂತಿಗಾಗಿ, ಮಕ್ಕಳಿಗೆ ಹಾಲುಣಿಸುವ ತಾಯಂದಿರಿಗೆ ಕೊಠಡಿ ನಿರ್ಮಿಸಲಾಗಿದ್ದು ಶುಕ್ರವಾರದಿಂದ ಪಿಂಕ್ ಕೊಠಡಿ ಕಾರ್ಯಾರಂಭ ಮಾಡಿದೆ. ಜೂ.11 ರಿಂದ ಶಕ್ತಿ ಯೋಜನೆ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರವು ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಕ್ರಮವಹಿಸಿದೆ ಎಂದು ಜಿ.ಪರಮೇಶ್ವರ ಭರವಸೆಯಿತ್ತರು.

    ಶಾಸಕ ಎಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts