ಹೈದರಾಬಾದ್: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್ಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಹೈದರಾಬಾದಿನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್, ಅವರೊಂದಿಗೆ ಆಟವಾಡಿ ಆದರೆ, ಬಿಆರ್ಎಸ್ಗೆ ಮತ ಹಾಕಿ ಎಂದು ಸಚಿವ ಕೆ.ಟಿ. ರಾಮರಾವ್ ಹೇಳಿದ್ದಾರೆ.
ಜುಬಿಲಿ ಹಿಲ್ಸ್ ಕ್ಷೇತ್ರದ ಬಿಆರ್ಎಸ್ ಶಾಸಕ ಮಗಂತಿ ಗೋಪಿನಾಥ್ ಅವರ ಪರ ಮತಯಾಚಿಸಿ ಮಾತನಾಡಿದ ಕೆಟಿಆರ್ ಚುನಾವಣೆಗೂ ಮುನ್ನ ಅವರು ಇಲ್ಲಿ ಎಲ್ಲಿಯಾದರೂ ಕಾಣಿಡಿಕೊಂಡಿದ್ದರ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಒಳ್ಳೆಯ ಕೆಲಸಗಳಿಗಾಗಿ ಭಿಕ್ಷೆ ಬೇಡಲು ಎಂದಿಗೂ ಹಿಂಜರಿಯುವುದಿಲ್ಲ: ಮೋಹನ್ ಭಾಗವತ್
ಅಜರುದ್ದೀನ್ ಮತಯಾಚಿಸಿ ನಿಮ್ಮ ಮನೆ ಬಳಿ ಬಂದಾಗ ಅವರ ಜತೆ ನಿಮ್ಮ ಮಕ್ಕಳನ್ನು ಕ್ರಿಕೆಟ್ ಆಡಲು ಬಿಡಿ. ಆದರೆ, ದಯವಿಟ್ಟು ನಿಮ್ಮ ಮತವನ್ನು ಗೋಪಿನಾಥ್ಗೆ ಹಾಕಿ. ಚುನಾವಣೆ ಮುಗಿಯುತ್ತಿದ್ದಂತೆ ಅಜರುದ್ದೀನ್ ಕ್ಷೇತ್ರದಿಂದ ಕಣ್ಮರೆಯಾಗುತ್ತಾರೆ. ಇಲ್ಲಿನ ಕಾಲೋನಿಗಳ ಹೆಸರು ಅಥವಾ ಕ್ಷೇತ್ರಗಳ ಸಮಸ್ಯೆ ಬಗ್ಗೆ ಅವರಿಗೆ ಕೊಂಚವಾದರೂ ಅರಿವಿದೆಯೇ ಎಂದು ಪ್ರಶ್ನಿಸಿದ್ದಾರೆ.
ಅಲ್ಪಸಂಖ್ಯಾತರು ಬಡವರಾಗಿಯೇ ಉಳಿದಿರುವುದಕ್ಕೆ ಮುಖ್ಯ ಕಾರಣ ಎಂದರೆ ಕಾಂಗ್ರೆಸ್ ಪಕ್ಷ. ಏಕೆಂದರೆ ಅವರಿಗೆ 11 ಅವಕಾಶಗಳನ್ನು ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷ ಕೆಲಸಗಳನ್ನು ಮಾಡುವ ಬದಲು ಜನರ ನಂಬಿಕೆಗಳಿಗೆ ದ್ರೋಹ ಎಸಗಿದೆ. ಕೆಸಿಆರ್ ನೇತೃತ್ವದಲ್ಲಿ ಬಿಆರ್ಎಸ್ ಪಕ್ಷ ತೆಲಂಗಾಣದಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ ಚಿತ್ರಣ ಬದಲಾಗಿದ್ದು, ಜನರು ಇದನ್ನು ನೋಡಿಯಾದರೂ ನಮಗೆ ಮತ ಹಾಕಿ ಎಂದು ಕೆಟಿಆರ್ ವಿನಂತಿಸಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂದಬರು ಲೋಕಸಭೆ ಎಲೆಕ್ಷನ್ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.