ಕೂಡಲಸಂಗಮ: ಕೃಷ್ಣಾ, ಮಲಪ್ರಭಾ ನದಿಗಳ ಸಂಗಮವಾದ ಸುಕ್ಷೇತ್ರ ಕೂಡಲಸಂಗಮಕ್ಕೆ ಪ್ರತಿವರ್ಷ ಸಂಪ್ರದಾಯದಂತೆ ಮಕರ ಸಂಕ್ರಾಂತಿಯ ಜನವರಿ 14 ರಂದು ಪುಣ್ಯಸ್ನಾನ, ಬಸವಣ್ಣನ ಐಕ್ಯಸ್ಥಳ ಹಾಗೂ ಸಂಗಮನಾಥನ ದರ್ಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಉದ್ದೇಶದಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಸುಕ್ಷೇತ್ರ ಕೂಡಲಸಂಗಮದ ಸಂಗಮೇಶ್ವರ ದೇವಾಲಯ ಬಳಿಯ ಕೃಷ್ಣಾ, ಮಲಪ್ರಭಾ ನದಿಯ ಪುಣ್ಯಸ್ನಾನವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ರಘು.ಎ.ಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.