More

    ಸಮರ್ಪಕ ಕುಡಿಯುವ ನೀರು ಬಿಡಲು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯ

    ಕೂಡ್ಲಿಗಿ: ಪಟ್ಟಣದ 10ನೇ ವಾರ್ಡ್‌ನಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಬಿಡುವಂತೆ ಮತ್ತು ಮಿನಿವಾಟರ್‌ಟ್ಯಾಂಕ್ ಅಳವಡಿಸುವಂತೆ ಒತ್ತಾಯಿಸಿ ಪಪಂ ಮುಖ್ಯಾಧಿಕಾರಿ ಫಿರೋಜ್‌ಖಾನ್‌ಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಬುಧವಾರ ಮನವಿ ಸಲ್ಲಿಸಿತು.

    ಈ ವಾರ್ಡ್‌ನಲ್ಲಿ 5 ರಿಂದ 8 ದಿನಕ್ಕೊಮ್ಮೆ ನೀರು ಬರುತ್ತಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ. ಪ್ರತಿ ತಿಂಗಳು ನೀರಿನ ಶುಲ್ಕ ಭರಿಸಿದರೂ, ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪಪಂ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಕೆ.ಈಶಪ್ಪ, ಪ್ರಮುಖರಾದ ಮಮತಾ, ಎನ್.ಮಂಜುಳಾ, ಟಿ.ಲೀಲಾವತಿ, ಕೆ.ಮಹಾದೇವಿ, ಟಿ.ರತ್ನಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts