ಗುರಿ ಸಾಧನೆಗೆ ಸಹಕಾರ ಇರಲಿ

ಕೂಡ್ಲಿಗಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಮಟ್ಟದ ಸೇವಾ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ, ಕೃಷಿ ಮೇಲ್ವಿಚಾರಕ ಮಹಾಲಿಂಗಯ್ಯ, ವಿಕಾಸ ಸಮನ್ವಯಾಧಿಕಾರಿ ರೇಖಾ ನೀರಲಕೇರಿ, ರೇಣುಕಾ ಇತರರಿದ್ದರು.

ಕೂಡ್ಲಿಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕರ್ತರು ಹಾಗೂ ಸಿಬ್ಬಂದಿ ಯೋಜನೆಯ ನಿಯಮಾನುಸಾರ ಸಂಘದ ಸದಸ್ಯರೊಂದಿಗೆ ಉತ್ತಮ ಒಡನಾಟ ಹೊಂದಿ ಕಾರ್ಯಪ್ರವೃತ್ತರಾದಾಗ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಾಣಲು ಸಾಧ್ಯ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

blank
blank

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸೇವಾ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಂಘಗಳ ಕಂತು, ಬಾಕಿ ಕಡಿಮೆ ಮಾಡಿಸುವುದರೊಂದಿಗೆ ಈ ವರ್ಷದ ಗುರಿ ಮತ್ತು ಸಾಧನೆಗೆ ಸಹಕಾರ ಇರಲಿ. ಒಕ್ಕೂಟ ಸಭೆ, ಸಂಘಗಳ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದರು.

ಯೋಜನೆಯು ಗ್ರಾಮೀಣ ಜನರ ಬದುಕಿಗೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಹಾಯ ಹಸ್ತ ಚಾಚಿದೆ. ಇದರ ಸದುಪಯೋಗವನ್ನು ಪಡೆಯಬೇಕು. ಸಂಘವು ಕೃಷಿ ಚಟುವಟಿಕೆಯಿಂದ ಸಣ್ಣ ವ್ಯಾಪಾರ-ವಹಿವಾಟು ಮಾಡುವವರನ್ನು ಕೈ ಹಿಡಿದಿದೆ. ಸಕಾಲದಲ್ಲಿ ಹಣ ಪಾವತಿಸುವುದರ ಜತೆ ಸಂಘದ ಆಶಯಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ತಾಲೂಕು ಯೋಜನಾಧಿಕಾರಿ ಸಂತೋಷ, ಎನ್‌ಆರ್‌ಎಲ್‌ಎಂ ಸಮನ್ವಯಾಧಿಕಾರಿ ಬಸವನಗೌಡ, ಕೃಷಿ ಮೇಲ್ವಿಚಾರಕ ಮಹಾಲಿಂಗಯ್ಯ, ಮೇಲ್ವಿಚಾರಕರಾದ ಪ್ರಕಾಶ್, ರುದ್ರೇಶ್, ಉಮೇಶ್, ಕರಿಯಪ್ಪ, ರೇಣುಕಾ, ಖಾಜಾಬನಿ, ಅಭಿಷೇಕ್, ಸಂತೋಷ, ಜ್ಯೋತಿ ಗುಡಿ, ಕಚೇರಿ ಪ್ರಬಂಧಕ ರೇವಣ್ಣ, ಸಹಾಯಕ ಪ್ರಬಂಧಕ ಮಲ್ಲಪ್ಪ, ಕಚೇರಿ ಸಹಾಯಕಿ ಭವಾನಿ, ನಿಂಗರಾಜು, ಟಿಎನ್‌ಒ ಪ್ರಕಾಶ್, ಸೇವಾ ಪ್ರತಿನಿಧಿಗಳು ಇದ್ದರು.

Share This Article

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…