More

    ರಕ್ತದಾನ ಪುಣ್ಯದ ಕಾರ್ಯ – ಡಾ.ಮಹಾದೇವ ಸ್ವಾಮೀಜಿ

    ಕುಕನೂರು: ರಕ್ತವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ಹಾಗಾಗಿ ಎಲ್ಲರೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ಡಾ.ಮಹಾದೇವ ಸ್ವಾಮೀಜಿ ಹೇಳಿದರು. ಶಿರೂರು ಗ್ರಾಮದಲ್ಲಿ ಶ್ರೀ ಕಲ್ಲಿನಾಥೇಶ್ವರ ಜಾತ್ರೋತ್ಸವ ನಿಮಿತ್ತ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

    ರಕ್ತದಾನದ ಪುಣ್ಯದ ಕಾರ್ಯದಿಂದ ಹಲವು ಜನರ ಪ್ರಾಣ ಉಳಿಸಲು ಸಾಧ್ಯ ಎಂದರು. ರೆಡ್ ಕ್ರಾಸ್ ಸಂಸ್ಥೆಯ ಜನಸಂಪರ್ಕ ಅಧಿಕಾರಿ ದೇವೇಂದ್ರಪ್ಪ ಹಿಟ್ನಾಳ ಮಾತನಾಡಿದರು. ವಿವಿಧ ಮಠದ ಶ್ರೀಗಳು ಭಾಗವಹಿಸಿದ್ದರು. ಶಿಬಿರದಲ್ಲಿ 67ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts