More

    ಕುಕ್ಕೆ ಚಂಪಾಷಷ್ಠಿ ಜಾತ್ರೆ ಅಬಾಧಿತ, ಸರ್ಕಾರದ ಮಾರ್ಗಸೂಚಿಯಂತೆ ನಡೆಸಲು ತೀರ್ಮಾನ

    ಸುಬ್ರಹ್ಮಣ್ಯ: ಡಿ.12ರಿಂದ 22ರವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ.
    ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೋವಿಡ್-19 ನಿಯಮಾವಳಿಗಳಿಗೆ ಅನುಸಾರವಾಗಿ ಜಾತ್ರಾ ಮಹೋತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ಷಷ್ಠಿ ಆಚರಣೆಯನ್ನು ಸೀಮಿತ ಭಕ್ತರ ಸಮಕ್ಷಮದಲ್ಲಿ, ನಿಯಮಗಳನ್ನು ಅಳವಡಿಸಿಕೊಂಡು ಸರಳವಾಗಿ ಸಂಪ್ರದಾಯಗಳಿಗೆ ಧಕ್ಕೆಯಾಗದಂತೆ ವ್ಯವಸ್ಥಿತವಾಗಿ ಆಚರಿಸಲಾಗುವುದು. ರಥೋತ್ಸವ ಸೇವಾರ್ಥಿಗಳಿಗೆ ಸೀಮಿತ ಪಾಸ್‌ಗಳನ್ನು ಮಾತ್ರ ನೀಡಲಾಗುವುದು. ಭಕ್ತರು ಕ್ಷೇತ್ರದೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

    ಉತ್ಸವ ನಡೆಸುವ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ. ಜಾತ್ರೆ ವೇಳೆ ಉರುಳು ಸೇವೆ, ತುಲಾಭಾರ ಸಹಿತ ಎಲ್ಲ ಸೇವೆಗಳನ್ನೂ ನಿಯಮಗಳನ್ನು ಪಾಲಿಸಿ ಅವಕಾಶ ನೀಡಲು ನಿರ್ಧರಿಸಲಾಗಿದೆ. ಊಟೋಪಚಾರ, ವಸತಿ, ಕುಡಿಯುವ ನೀರು, ವಿದ್ಯುತ್ ಪೂರೈಕೆ ಸಂಬಂಧಿತ ವಿಚಾರಗಳ ಬಗ್ಗೆ ಹಾಗೂ ಹೊರೆಕಾಣಿಕೆ ಯಾವ ರೀತಿಯಲ್ಲಿ ಸ್ವೀಕರಿಸಬೇಕು, ಅನ್ನಪ್ರಸಾದ ವಿತರಣೆ, ಪಾರ್ಕಿಂಗ್, ಬಂದೋಬಸ್ತ್ ವ್ಯವಸ್ಥೆ ಬಗ್ಗೆ ಚರ್ಚೆ ನಡೆದಿದೆ. ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಹಾರ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನಿಸಲಾಯಿತು.

    ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಅಂಗಾರ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ಎಎಸ್‌ಪಿ ಲಖನ್ ಸಿಂಗ್, ಹಿಂದು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್, ಜಿಲ್ಲಾ ಅಗ್ನಿಶಾಮಕ ದಳದ ಎಸ್‌ಪಿ ಭರತ್ ಕುಮಾರ್, ಕೆಎಸ್‌ಆರ್‌ಟಿಸಿ ಡಿಸಿ ಅರುಣ್ ಎನ್.ಎಸ್., ಎಡಬ್ಲುೃಇ ಸಣ್ಣೇಗೌಡ, ಠಾಣಾಧಿಕಾರಿ ಓಮನಾ, ಕಡಬ ತಹಸೀಲ್ದಾರ್ ಅನಂತಶಂಕರ, ಪುತ್ತೂರು ಇಒ ನವೀನ್ ಭಂಡಾರಿ, ತಾಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಅಭಿವೃದ್ಧಿ ಸಮಿತಿ ಸದಸ್ಯರಾದ ಮೋಹನ್‌ರಾಮ್ ಸುಳ್ಳಿ, ವನಜಾ ವಿ.ಭಟ್, ಎ.ಬಿ.ಮನೋಹರ್ ರೈ, ಪಿ.ಜಿ.ಎಸ್.ಎನ್.ಪ್ರಸಾದ್, ಪ್ರಸನ್ನ ದರ್ಬೆ, ಇಒ ರವೀಂದ್ರ ಎಂ.ಎಚ್, ಎಇಒ ಪುಷ್ಪಲತಾ, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts