ಕುಕ್ಕೆ ಕ್ಷೇತ್ರದಲ್ಲಿ ಶ್ರೀ ದೇವರ ಅಶ್ವವಾಹನೋತ್ಸವ : ಸವಾರಿ ಕಟ್ಟೆಯಲ್ಲಿ ಪೂಜೆ

blank

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ವಾರ್ಷಿಕ ಜಾತ್ರೋತ್ಸವದ ನಿಮಿತ್ತ ಮಂಗಳವಾರ ರಾತ್ರಿ ಮಯೂರ ವಾಹನೋತ್ಸವ ಜರುಗಿತು. ಶ್ರೀ ದೇವರ ಮಹಾಪೂಜೆಯ ಬಳಿಕ ಉತ್ಸವ ಆರಂಭವಾಯಿತು. ನಂತರ ಶ್ರೀ ದೇವರ ಬಂಡಿ ರಥೋತ್ಸವ ಬಳಿಕ ಪಾಲಕಿ ಉತ್ಸವ ನಡೆಯಿತು. ಚಂದ್ರಮಂಡಲ ರಥದಲ್ಲಿ ಶ್ರೀದೇವರ ಮಯೂರವಾಹನೋತ್ಸವ ನೆರವೇರಿ ಬಳಿಕ ಸವಾರಿ ಮಂಟಪದ ಸವಾರಿ ಕಟ್ಟೆಯಲ್ಲಿ ಪೂಜೆ ನಡೆಯಿತು.

ಭಾನುವಾರ ರಾತ್ರಿ ಶೇಷವಾಹನೋತ್ಸವ, ಸೋಮವಾರ ರಾತ್ರಿ ಅಶ್ವವಾಹನೋತ್ಸವ ನಡೆದಿದೆ. ಸೋಮವಾರ ಶ್ರೀ ಕ್ಷೇತ್ರದಲ್ಲಿ ನಿರಂತರ ಮಳೆಯಾಗಿದ್ದರೂ ಅಡಚಣೆಯಾಗದೆ ಶ್ರೀ ದೇವರ ಉತ್ಸವ ಸಾಂಗವಾಗಿ ನೆರವೇರಿದೆ. ಇದೇ ರೀತಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಳೆ ಬಾರದೆ ಉತ್ಸವಗಳು ಸಾಂಗವಾಗಿ ನೆರವೇರಬೇಕೆಂದೂ ಭಕ್ತರು ಪ್ರಾರ್ಥನೆ ಮಾಡಿದ್ದಾರೆ.

ತಂಬಾಕು ಉತ್ಪನ್ನ ವಶ, ಆರೋಪಿ ಬಂಧನ

ಪಠ್ಯೇತರ ಚಟುವಟಿಕೆಗೆ ಪ್ರೇರಣೆ ಅವಶ್ಯ : ನಂದಳಿಕೆ ಸುಹಾಸ್ ಹೆಗ್ಡೆ ಅಭಿಮತ

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…