More

    ಕರೊನಾ ವೈರಸ್​ ಎಫೆಕ್ಟ್​: ಕುಕ್ಕೆಸುಬ್ರಮಣ್ಯ ದೇವಾಲಯದಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ

    ಮಂಗಳೂರು: ಕರೊನಾ ವೈರಸ್​ ಸೋಂಕು ಭೀತಿ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ದೇವರ ದರ್ಶನ ಹೊರತುಪಡಿಸಿ ಇತರೆ ಧಾರ್ಮಿಕ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

    ಭಕ್ತರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ಪ ಸಂಸ್ಕಾರ, ವಸತಿ ಗೃಹದಲ್ಲಿ ತುಂಗುವುದನ್ನು ರದ್ದುಪಡಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

    ದೇವರ ಉತ್ಸವದಲ್ಲೂ ಭಕ್ತರು ಭಾಗವಹಿಸುವುದನ್ನು ನಿಷೇಧಿಸಲಾಗಿದೆ. ದೇವಾಲಯದ ಸಿಬ್ಬಂದಿ ಮಾತ್ರ ಉತ್ಸವದಲ್ಲಿ ಪಾಲ್ಗೊಳ್ಳಬಹುದಾಗಿದೆ.

    ಕರೊನಾ ವೈರಸ್​ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇವಾಲಯದ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿಗಳು ಆಡಳಿತ ಮಂಡಳಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದಂತೆ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.

    ಕರೊನಾ ವೈರಸ್​ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಇಸ್ಕಾನ್​ ದೇವಾಲಯ ತಾತ್ಕಾಲಿಕ ಬಂದ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts