More

    ವೋಟ್​ ಕಿತ್ತುಕೊಳ್ಳಲು ಕುಮಾರಸ್ವಾಮಿ ಸಿದ್ದರಾಮಯ್ಯ ಕಾಂಪಿಟೇಷನ್ ಮಾಡ್ತಿದಾರೆ: ಆರಗ ಜ್ಞಾನೇಂದ್ರ

    ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಒಂದು ವರ್ಗದ ಓಟ್​ಗಳನ್ನು ಕಿತ್ತುಕೊಳ್ಳಲು ಕಾಂಪಿಟಿಷನ್​ ಮಾಡುತ್ತಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜ್ಞಾನೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಜೆಡಿಎಸ್​ ನಾಯಕ ಎಚ್​.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಆರ್​​ಎಸ್​ಎಸ್​ ವಿರುದ್ಧ ನೀಡಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಕುಮಾರಸ್ವಾಮಿ, ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಒಂದು ವರ್ಗದ ಓಟ್ ಬ್ಯಾಂಕಿಗಾಗಿ ಅವರು ಜೊಲ್ಲು ಸುರಿಸುತ್ತಿದ್ದಾರೆ ಅಷ್ಟೆ ಎಂದರು.

    ಇದನ್ನೂ ಓದಿ: ‘ಬಿಜೆಪಿಯವ್ರು ಬುರ್ಖಾ ಹಾಕ್ಕೊಂಡ್‌ ಹೋದ್ರೂ ಓಟ್‌ ಬೀಳಲ್ಲ- ಕಾಂಗ್ರೆಸ್‌ನವರ ಮಕ್ಳೆಲ್ಲಾ ಮುಸ್ಲಿಮರಾಗ್ತಾರೆ’

    “ಆರೆಸ್ಸೆಸ್ ಏನು ಮಾಡಿದೆ ಹೇಳಿ” ಎಂದು ಪ್ರಶ್ನೆ ಹಾಕಿದ ಅವರು, “ನಾನು ಆರೆಸ್ಸೆಸ್, ರಾಷ್ಟ್ರಪತಿ, ಉಪರಾಷ್ಟ್ರಪತಿ ಆರೆಸ್ಸೆಸ್, ಪ್ರಧಾನಿ ಮೋದಿ ಆರೆಸ್ಸೆಸ್​​ನಿಂದ ಬಂದವರು. ನಾವು ನಿಮಗೆ ಏನು ತೊಂದರೆ ಮಾಡಿದ್ದೇವೆ ಹೇಳಿ” ಎಂದರು. “ಆರೆಸ್ಸೆಸ್ ದೇಶಭಕ್ತಿ ಹೇಳಿಕೊಡುವ ದೊಡ್ಡ ಸಂಘಟನೆ. ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ವೋಟ್ ಕಿತ್ತುಕೊಳ್ಳಲು ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಕಾಂಪಿಟೇಷನ್ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಆರ್​​ಎಸ್​ಎಸ್​ ಬಗ್ಗೆ ಪ್ರೆಸ್​ ಮೀಟ್ ಮಾಡಲಿ. ಎಲ್ಲವೂ ಚರ್ಚೆಯಾಗಲಿ ನೋಡೋಣ” ಎಂದು ಆರಗ ಜ್ಞಾನೇಂದ್ರ ಸವಾಲು ಹಾಕಿದರು.

    VIDEO| ವರುಣದ ವರಸೆಗೆ ನಲುಗಿದ ನಗರ: ರೆಸ್ಟೊರೆಂಟಿಗೆ ನುಗ್ಗಿದ ನೀರು; ಕೊಚ್ಚಿಹೋದ ಮಿನಿಟ್ರಕ್!

    ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್​ರೇಪ್​: ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts