More

    ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿಯವರ ಕಾಳಜಿ ಅಗತ್ಯವಿಲ್ಲ; ಡಿಕೆಶಿ

    ಬೆಂಗಳೂರು: ಸಿದ್ದರಾಮಯ್ಯ ಅವರ ಮೇಲೆ ಕುಮಾರಸ್ವಾಮಿ ಪ್ರೀತಿ ಅವಶ್ಯಕತೆ ಅಗತ್ಯವಿಲ್ಲ. ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇವೆ ಅಂದಾಗ ಏನಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾಗೆ ಜಹೀರ್ ಖಾನ್​ನಂಥ ಎಡಗೈ ವೇಗಿಯ ಅವಶ್ಯಕತೆಯಿದೆ; ಆರ್​.ಅಶ್ವಿನ್ 

    ಸಿದ್ದರಾಮಯ್ಯ ಅವರು ಶಾಸಕರಾಗಿ ಬಾದಾಮಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಹಲವು ಕ್ಷೇತ್ರಗಳಿಂದ ಸಿದ್ದರಾಮಯ್ಯ ಅವರನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಡಿಕೆಶಿ ಹೇಳಿದರು.

    ಚುನಾವಣೆಯ ದೃಷ್ಟಿಯಿಂದ ರಾಜ್ಯಪ್ರವಾಸ ಮಾಡಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದೆ. ನನ್ನನ್ನೂ ರಾಜ್ಯ ಪ್ರವಾಸ ಮಾಡುವಂತೆ ಹೇಳಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಸೂಕ್ತವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ದೂರು ನೀಡಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಪ್ರಕರಣ; ಕೊಡಿಗೆಹಳ್ಳಿ ಇನ್ಸ್​ಪೆಕ್ಟರ್ ಅಮಾನತು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts