More

    ಕುಂಭಮೇಳದ ಸ್ಥಳ ಪರಿಶೀಲಿಸಿದ ಸಚಿವ ಕೆ.ಸಿ.ನಾರಾಯಣಗೌಡ

    ಕೆ.ಆರ್.ಪೇಟೆ: ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16ರವರೆಗೆ ಕುಂಭಮೇಳ ನಡೆಯಲಿದೆ. ಈ ನಾಲ್ಕು ದಿನದ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಸೂಚಿಸಿದರು.
    ತಾಲೂಕಿನ ಅಂಬಿಗರಹಳ್ಳಿಯಲ್ಲಿ ಮಹಾಕುಂಭಮೇಳ ಆಚರಣೆ ಹಿನ್ನಲೆ ಶುಕ್ರವಾರ ಸ್ಥಳ ಪರಿಶೀಲಿಸಿ ಬಳಿಕ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಸ್ವಾಮೀಜಿಗಳು ಹಾಗೂ ಇನ್ನಿತರ ಗಣ್ಯರು ಆಗಮಿಸಲಿದ್ದಾರೆ. ಆದ್ದರಿಂದ ಯಾವುದೇ ರೀತಿಯ ಕುಂದು ಕೊರತೆಗಳು ಆಗದ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ಹೇಳಿದರು.
    ದೇವಸ್ಥಾನ ಅಭಿವೃದ್ಧಿ, ರಸ್ತೆ ಕಾಮಗಾರಿ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣ ಮಾಡಬೇಕು. ಧಾರ್ಮಿಕ ಕಾರ್ಯಕ್ರಮಗಳು ಹಿಂದಿನ ಪರಂಪರೆಯಂತೆ ನಡೆಯಬೇಕು. ಲೇಸರ್ ಶೋ, ವಿವಿಧ ಶೈಲಿಯ ದೀಪಾಲಂಕಾರ, ವಸ್ತು ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಯಬೇಕು ಎಂದರು.
    ಜಿಲ್ಲಾಧಿಕಾರಿ ಎಸ್.ಅಶ್ವಥಿ, ಎಡಿಸಿ ಡಾ.ಎಚ್.ಎಲ್.ನಾಗರಾಜು, ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಎಎಸ್ಪಿ ವೇಣುಗೋಪಾಲ್, ಜಿ.ಪಂ ಉಪಕಾರ್ಯದರ್ಶಿ ಸರಸ್ವತಿ, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಎಂ.ವಿ.ರೂಪಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts