More

    ಕುಮ್ಕಿ ಹಕ್ಕು ವಿಧಾನಸಭೆಯಲ್ಲಿ ಪ್ರಸ್ತಾಪ: ಶಾಸಕ ಉಮಾನಾಥ ಕೋಟ್ಯಾನ್ ಭರವಸೆ

    ಮೂಡುಬಿದಿರೆ: ಕೃಷಿಕರಿಗೆ ಕುಮ್ಕಿ ಹಕ್ಕು ಸಿಗುವುಂತಾಗಲು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುತ್ತೇನೆ. ಭಾರತೀಯ ಕಿಸಾನ್ ಸಂಘದಂತಹ ಕೃಷಿ ಸಂಘ ಸಂಸ್ಥೆಗಳು ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

    ತೋಟಗಾರಿಕಾ ದಿನಾಚರಣೆ ಅಂಗವಾಗಿ ಭಾರತೀಯ ಕಿಸಾನ್ ಸಂಘ ಮೂಡುಬಿದಿರೆ ತಾಲೂಕು, ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಸೋಮವಾರ ತೆಂಗು, ಅಡಕೆ, ಗೇರು ಮತ್ತಿತರ ತೋಟಗಾರಿಕಾ ಬೆಳೆಗಳ ಕೀಟ ಬಾಧೆಯ ಕುರಿತು ರೈತ ವಿಜ್ಞಾನಿ ಸಂವಾದ ಉದ್ಘಾಟಿಸಿ ಮಾತನಾಡಿದರು.

    ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ದಕ್ಷಿಣ ಪ್ರಾಂತ ಭಾರತೀಯ ಕಿಸಾನ್ ಸಂಘ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ, ಸಂಘದ ಮೂಡುಬಿದಿರೆ ತಾಲೂಕು ಪ್ರಧಾನ ಕಾರ್ಯದರ್ಶಿ ವಸಂತ ಭಟ್ ಪಯ್ಯಡೆ ಉಪಸ್ಥಿತರಿದ್ದರು. ಡಾ.ಭವಿಷ್ಯ್, ವಿಜ್ಞಾನಿ ರಾಜ್ ಕುಮಾರ್, ತೋಟಗಾರಿಕಾ ಇಲಾಖೆ ನಿರ್ದೇಶಕ ಪ್ರವೀಣ್, ಹಿರಿಯ ಅಧಿಕಾರಿ ಯುಗೇಂದ್ರ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಎಸ್‌ಬಿಐ ವಿಮಾ ಕಂಪನಿ ವತಿಯಿಂದ ರೈತರಿಗೆ ಸಸಿಗಳನ್ನು ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts