More

    ಕುಷ್ಟಗಿಗೆ ಮಾ.12ರಂದು ಬಿಜೆಪಿ ಸಂಕಲ್ಪ ಯಾತ್ರೆ: ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಮಾಹಿತಿ

    ಕುಷ್ಟಗಿ: ಬಿಜೆಪಿ ಸಂಕಲ್ಪ ಯಾತ್ರೆ ಮಾ.12ರಂದು ಪಟ್ಟಣಕ್ಕೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಹೇಳಿದರು.

    ಮಸ್ಕಿಯಿಂದ ತಾವರಗೇರಾ ಪಟ್ಟಣಕ್ಕೆ ಆಗಮಿಸಿ ನಂತರ ಹಿರೇಮನ್ನಾಪುರ ಮಾರ್ಗವಾಗಿ ಕುಷ್ಟಗಿ ತಲುಪಲಿದೆ. ಕುಷ್ಟಗಿಯಲ್ಲಿ ರೋಡ್ ಶೋ ಹಾಗೂ ಮಾರುತಿ ವೃತ್ತದಲ್ಲಿ ಬಹಿರಂಗ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪಟ್ಟಣದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಹನುಮಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮಾ.14ರಂದು ಎಸ್ಟಿ ಮೋರ್ಚಾ ಸಮಾವೇಶ ನಡೆಯಲಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಸಚಿವ ಹಾಲಪ್ಪ ಆಚಾರ್, ಶಾಸಕ ರಾಜುಗೌಡ ಇತರರು ಭಾಗವಹಿಸಲಿದ್ದಾರೆ. 10ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ ಎಂದರು. ಮಾಜಿ ಶಾಸಕ ಕೆ.ಶರಣಪ್ಪ, ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳಿಕೇರಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣವರ್, ಯುಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಪ್ರಮುಖರಾದ ಚಂದ್ರಕಾಂತ ವಡಗೇರಿ, ಈರಣ್ಣ ಸೊಬರದ್ ಇತರರಿದ್ದರು.

    ಜನರ ದೃಷ್ಟಿಯಲ್ಲಿ ಶಾಸಕನಾಗಿದ್ದೇನೆ: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಅವಧಿಗೆ ಅಧಿಕಾರ ನಡೆಸಿ ಮರು ಆಯ್ಕೆ ಬಯಸಿ ಸ್ಪರ್ಧಿಸಿದವರು ಗೆಲುವು ಸಾಧಿಸಿದ ಉದಾಹರಣೆ ಇಲ್ಲ. ಆದರೆ, ಈ ಬಾರಿ ನಾನು ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ದೊಡ್ಡನಗೌಡ ಪಾಟೀಲ್, ಚುನಾವಣೆ ಮುನ್ನವೇ ನೀವು ಶಾಸಕರಾಗಿದ್ದೀರಿ ಎಂದು ಜನ ಹೇಳುತ್ತಿದ್ದಾರೆ. ಶಾಸಕ ಬಯ್ಯಪುರ ವರ್ತನೆಯಿಂದ ಬೇಸತ್ತಿರುವ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಬಿಜೆಪಿಯತ್ತ ಬರುತ್ತಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts