More

    ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಚಿತ್ರದುರ್ಗ ಜಿಲ್ಲೆ ಸೇರಿಸುವುದು ಬೇಡ; ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ

    ಕುಷ್ಟಗಿ: ಚಿತ್ರದುರ್ಗ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಸೇರಿಸದಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮಂಗಳವಾರ ಪತ್ರ ಬರೆದಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಅಥವಾ ಇಡೀ ಜಿಲ್ಲೆಯನ್ನು ಕಕ ವ್ಯಾಪ್ತಿಗೆ ಸೇರಿಸುವ ವಿಚಾರ ಗೊತ್ತಾಗಿದೆ. ಈ ಹಿಂದೆ ಗದಗ ಜಿಲ್ಲೆ ಸೇರಿಸುವ ಪ್ರಯತ್ನ ನಡೆದಾಗ ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿ ನಿರ್ಧಾರ ಕೈ ಬಿಡಲಾಗಿತ್ತು. ಸದ್ಯ ಚಿತ್ರದುರ್ಗ ಜಿಲ್ಲೆ ಸೇರಿಸುವ ಪ್ರಯತ್ನವೇನಾದರೂ ನಡೆದಿದ್ದರೆ ಕೈಬಿಡಬೇಕು. ಅಂತಹ ಪ್ರಸ್ತಾವನೆ ಬಂದಲ್ಲಿ ಪರಿಗಣಿಸಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts