ಬೆಂಗಳೂರು: ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಅಚ್ಚರಿಯ ಫಲಿತಾಂಶ ಬಂದಿದ್ದು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ವಿದ್ಯಾರ್ಥಿನಿ ತಬಸುಮ್ ಶೇಖ್ರನ್ನು ಕುಶು ನಾಯ್ಕ್ ಮರು ಮೌಲ್ಯಮಾಪನದಲ್ಲಿ ಹಿಂದಿಕ್ಕಿದ್ದಾರೆ.
ವಿಶೇಷ ಚೇತನ ವಿದ್ಯಾರ್ಥಿ
ಏಪ್ರಿಲ್ 21ರಂದು ಪ್ರಕಟವಾದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಯನಗರ ಕಾಲೇಜಿನ ವಿದ್ಯಾರ್ಥಿನಿಯಾದ ತಬಸುಮ್ ಶೇಖ್ 593 ಅಂಕಗಳೊಂದಿಗೆ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಳು. ಇದೀಗ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶು ನಾಯ್ಕ್ ಪ್ರಥಮ ಸ್ಥಾನ ಪಡೆದಿದ್ದಾರೆ.
594 ಅಂಕ
ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ ಕುಶು ನಾಯ್ಕ್ಗೆ ಎರಡು ಹೆಚ್ಚು ಅಂಕಗಳು ಬಂದಿವೆ. ಈ ಮೊದಲು 592 ಅಂಕಗಳಿತ್ತು. ಇದೀಗ ಎರಡು ಹೆಚ್ಚುವರಿ ಅಂಕಗಳೊಂದಿಗೆ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.
ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿ
ಕುಶು ನಾಯ್ಕ್, ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿ. ಇದೀಗ ಪ್ರಥಮ ಸ್ಥಾನ ಗಳಿಸುವ ಮೂಲಕ ಸತತ ಎಂಟು ಬಾರಿ ವಿಜಯನಗರ ಜಿಲ್ಲೆಯ ಕೊಟ್ಟೂರಿಗೆ ಫಸ್ಟ್ ರ್ಯಾಂಕ್ ಒಲಿದುಬಂದಿದೆ. (ದಿಗ್ವಿಜಯ ನ್ಯೂಸ್)
ಅಶ್ಲೀಲ ವಿಡಿಯೋ ಅಪ್ಲೋಡ್! ನಟಿಯ ವಿರುದ್ಧವೇ ಗಂಭೀರ ಆರೋಪ ಮಾಡಿದ ಪ್ರಿಯಕರ
ಲಾಲ್ ಸಲಾಂ ಚಿತ್ರದಲ್ಲಿ ಕಪಿಲ್ ದೇವ್: ಕ್ರಿಕೆಟ್ ಲೆಜೆಂಡ್ ಜತೆ ನಟಿಸುವುದು ನನ್ನ ಸೌಭಾಗ್ಯ ಎಂದ ರಜನಿಕಾಂತ್