ಬೆಂಗಳೂರು: ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ತನ್ನ ತಂದೆ ಹನುಮಂತರಾಯಪ್ಪ ಅವರೊಂದಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಉಪಚುನಾವಣೆಯ ಕಾವು ಏರುತ್ತಿರುವ ಸಂದರ್ಭದಲ್ಲೇ ಕುಸುಮಾ ಮತ್ತು ಹನುಮಂತರಾಯಪ್ಪ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಇತರೆ ಟಿಕೆಟ್ ಆಕಾಂಕ್ಷಿಗಳ ಕಣ್ಣು ಕೆಂಪಾಗುವಂತೆ ಮಾಡಿದ್ದಾರೆ.
ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರು ಎಂಬ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಭಾನುವಾರ ಕುಸುಮಾ ತಲೆ ಮೇಲೆ ‘ಕೈ’ ಇಟ್ಟು ಆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದರು. ಈ ಫೋಟೋ ಇದೀಗ ವೈರಲ್ ಆಗಿದ್ದು, ರಾಜಕೀಯ ಚಿಂತಕರ ಚಾವಡಿಯಲ್ಲಿ ಬಹುಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ಆರ್ಆರ್ ನಗರ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್ ಲಿಸ್ಟ್
ಅಭ್ಯರ್ಥಿ ಆಯ್ಕೆ ಪಟ್ಟಿಯನ್ನು ಫೈನಲ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಶಿಫಾರಸ್ಸಿಗಾಗಿ ಭಾನುವಾರ ಸಂಜೆ ಕಳುಹಿಸಿದ್ದಾರೆ. ಅಂದಹಾಗೇ ಆ ಪಟ್ಟಿಯಲ್ಲಿ ಹೆಸರಿದೆ ಗೊತ್ತಾ? ಈಗಾಗಲೇ ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರೇ ಅಭ್ಯರ್ಥಿ ಎಂದು ಡಿಕೆಶಿ ಘೋಷಿಸಿದ್ದರು. ಅದರಂತೆ ಅಭ್ಯರ್ಥಿ ಆಯ್ಕೆ ಪಟ್ಟಿಯಲ್ಲಿ ಅವರ ಹೆಸರಿದೆ. ಇನ್ನು ಭಾರೀ ಕುತೂಹಲ ಮೂಡಿಸಿರುವ ಆರ್ಆರ್ ನಗರ ಕ್ಷೇತ್ರಕ್ಕೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ.
ಪಕ್ಷ ಸೇರ್ಪಡೆ ಬೆನ್ನಲ್ಲೇ ವಿಶೇಷವಾಗಿ ಕುಸುಮಾಗೆ ಡಿಕೆಶಿ ಮಾಡಿದ ತಾಕೀತು ಏನು?