ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮತಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿ ಭಾರಿ ಮುನ್ನಡೆ ಸಾಧಿಸಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಸೋಲಿನ ಭಯ ಆರಂಭವಾಗಿದೆ ಎನ್ನಲಾಗಿದೆ.
ಮುನಿರತ್ನ ಅವರು ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. ಬಹುತೇಕ ಗೆಲುವು ಖಚಿತ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕುಸುಮಾಗೆ ಭಯ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಮತಗಟ್ಟೆಗೆ ಹೋಗದೆ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.
ಇದನ್ನೂ ಓದಿ: ಪೊಲೀಸ್ ಕಿರುಕಳಕ್ಕೆ ಬೇಸತ್ತು ಇಡೀ ಕುಟುಂಬ ಸೂಸೈಡ್: ಸಿಎಂ ಜಗನ್ ಖಡಕ್ ಆದೇಶ, ಆರೋಪಿಗಳಲ್ಲಿ ನಡುಕ!
ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ತೆರಳುವುದಾಗಿ ತಿಳಿಸಿದ್ದರು. ಆದರೆ, ಗಂಟೆ 12 ಆಗುತ್ತಿದ್ದರು. ಇನ್ನು ಮತಗಟ್ಟೆಗೆ ಬರದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮಹಿಳೆಯರ ಸಂಭ್ರಮ
ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಕೌಂಟಿಂಗ್ ಸೆಂಟರ್ ಬಳಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಮುನಿರತ್ನ ಪರ ಘೋಷಣೆ ಕೂಗಿ ಮಹಿಳಾ ಕಾರ್ಯಕರ್ತೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)
LIVE: ಯಾರ ಮುಡಿಗೆ ಶಿರಾ, ಆರ್.ಆರ್.ನಗರ? ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ