More

    ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?: ನಿನ್ನೆ ಹೇಳಿದ ಮಾತಿನಂತೆ ನಡೆಯದ ಕಾಂಗ್ರೆಸ್​ ಅಭ್ಯರ್ಥಿ

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮತಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿ ಭಾರಿ ಮುನ್ನಡೆ ಸಾಧಿಸಿರುವುದರಿಂದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾಗೆ ಸೋಲಿನ ಭಯ ಆರಂಭವಾಗಿದೆ ಎನ್ನಲಾಗಿದೆ.

    ಮುನಿರತ್ನ ಅವರು ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. ಬಹುತೇಕ ಗೆಲುವು ಖಚಿತ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕುಸುಮಾಗೆ ಭಯ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಮತಗಟ್ಟೆಗೆ ಹೋಗದೆ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.

    ಇದನ್ನೂ ಓದಿ: ಪೊಲೀಸ್​ ಕಿರುಕಳಕ್ಕೆ ಬೇಸತ್ತು ಇಡೀ ಕುಟುಂಬ ಸೂಸೈಡ್​: ಸಿಎಂ ಜಗನ್​ ಖಡಕ್​ ಆದೇಶ, ಆರೋಪಿಗಳಲ್ಲಿ ನಡುಕ!

    ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ತೆರಳುವುದಾಗಿ ತಿಳಿಸಿದ್ದರು. ಆದರೆ, ಗಂಟೆ 12 ಆಗುತ್ತಿದ್ದರು. ಇನ್ನು ಮತಗಟ್ಟೆಗೆ ಬರದಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಮಹಿಳೆಯರ ಸಂಭ್ರಮ
    ಆರ್​ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಕೌಂಟಿಂಗ್ ಸೆಂಟರ್ ಬಳಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಮುನಿರತ್ನ ಪರ ಘೋಷಣೆ ಕೂಗಿ ಮಹಿಳಾ ಕಾರ್ಯಕರ್ತೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

    LIVE: ಯಾರ ಮುಡಿಗೆ ಶಿರಾ, ಆರ್.ಆರ್.ನಗರ? ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts