ದುಡಿಯುವ ಕೈಗಳಿಗೆ ನರೇಗಾ ಸಹಕಾರಿ

blank

ಅರಕೇರಾ: ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಆಲ್ಕೋಡ ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಹೇಳಿದರು.

blank

ಇದನ್ನೂ ಓದಿ: ನರೇಗಾ ಯೋಜನೆ ಲಾಭ ಪಡೆಯಿರಿ

ತಾಲೂಕಿನ ಆಲ್ಕೋಡ ಗ್ರಾಮದ ಅಮೃತ ಸರೋವರ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ನರೇಗಾ ಯೋಜನೆ ಬಡ ಕುಟುಂಬಗಳಿಗೆ ನೆರವಾಗಿದೆ. ನಗರ ಪ್ರದೇಶಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿದೆ.

ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ 500 ಫಲಾನುಭವಿಗಳಿಗೆ ಕೆಲಸ ನೀಡಲಾಗುತ್ತಿದೆ. ಕೆರೆಯಲ್ಲಿ ಹೂಳು ತೆಗೆಯುವುದರಿಂದ ಕೆರೆ ಪುನಶ್ಚೇತನಗೊಳ್ಳುತ್ತದೆ. ಕೆರೆ ಸುತ್ತಲಿನ ಕೆಲ ಕಿಮೀವರೆಗೆ ಜಲಮೂಲ ಅಭಿವೃದ್ಧಿಗೊಳ್ಳುತ್ತದೆ. ಬೋರ್‌ವೆಲ್‌ಗಳಲ್ಲಿಯೂ ನೀರಿನ ಪ್ರಮಾಣ ಹೆಚ್ಚುತ್ತದೆ ಎಂದರು.

ಪಿಡಿಒ ಮಂಜುನಾಥ ಯಾದವ ಮಾತನಾಡಿ, ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸರ್ಕಾರ ಇದಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಸ್ಥಳೀಯ ಕೆರೆ ಪುನಶ್ಚೇತನದಿಂದ ಮಳೆಗಾಲದಲ್ಲಿ ಮೈದುಂಬಿಕೊಳ್ಳುತ್ತದೆ. ಜನ ಜಾನುವಾರುಗಳಿಗೆ ಕೆರೆ ಆಸರೆಯಾಗಲಿದೆ ಎಂದರು.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank