ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸದಂತೆ ಒತ್ತಾಯಿಸಿ ಕಂಪ್ಲಿಯಲ್ಲಿ ವಿವಿಧ ಸಂಘಟನೆಗಳಿಂದ ತಹಸೀಲ್ದಾರ್ ರೇಣುಕಾಗೆ ಮನವಿ

blank

ಕಂಪ್ಲಿ: ಕಾರ್ಮಿಕ ಕಾಯ್ದೆಗಳ ಅಮಾನತು ಖಂಡಿಸಿ ತಾಲೂಕು ಕರ್ನಾಟಕ ಶ್ರಮಿಕ ಶಕ್ತಿ ಕೇಂದ್ರ ಸೇರಿ ವಿವಿಧ ಸಂಘಟನೆಗಳ ಮುಖಂಡರು ಶುಕ್ರವಾರ ತಹಸೀಲ್ದಾರ್ ಎಂ.ರೇಣುಕಾಗೆ ಮನವಿ ಸಲ್ಲಿಸಿದರು.

ಶ್ರಮಿಕ ಶಕ್ತಿ ಕೇಂದ್ರದ ಮುಖಂಡರ ಕರಿಯಪ್ಪ ಗುಡಿಮನಿ ಮಾತನಾಡಿ, ಕಾರ್ಪೋರೇಟ್ ಕಂಪನಿಗಳ ಮೆಚ್ಚಿಸಲು ಸರ್ಕಾರ ಕಾರ್ಮಿಕ ಕಾಯ್ದೆ ಅಮಾನತುಗೊಳಿಸುವ ಷಡ್ಯಂತ್ರ ಮಾಡುತ್ತಿದೆ. ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಬೃಹತ್ ಬಂಡವಾಳಶಾಹಿಗಳ ಪರವಾಗಿದೆ. ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಕರೊನಾ ಸಂತ್ರಸ್ತ ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಹತ್ತು ಸಾವಿರ ರೂ. ಸಹಾಯಧನ, ಸಮಗ್ರ ಆಹಾರ ಸಾಮಗ್ರಿ ಒದಗಿಸಬೇಕು. 8 ರಿಂದ 12 ಗಂಟೆಗೆ ಕೆಲಸದ ಅವಧಿ ಹೆಚ್ಚಿಸಬಾರದು. ಸರ್ವಜನ ಹಿತರಕ್ಷಣೆಗಾಗಿ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಜನಶಕ್ತಿ, ಶ್ರಮಿಕ ಶಕ್ತಿ, ಮಹಿಳಾ ಮುನ್ನಡೆ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ವಿದ್ಯಾರ್ಥಿ ಸಂಘಟನೆಗಳ ಪ್ರಮುಖರಾದ ವಸಂತರಾಜ ಕಹಳೆ, ಇ.ಧನಂಜಯ, ಸಿ.ಯಲ್ಲಮ್ಮ, ಕೆ.ನೀಲಪ್ಪ ಪೇಂಟರ್, ಶಾಂತಪ್ಪ ಪೂಜಾರಿ, ಶ್ರೀಕಾಂತ್, ಸಿ.ಬಸವರಾಜ, ಶಶಿಧರ, ಆರ್.ನಾಗರಾಜ, ಪಿ.ಬಸವರಾಜ, ಸುಂಕಪ್ಪ ಇತರರಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…