ಮಂಗಳೂರು: ಇಲ್ಲಿನ ಬೈಕಂಪಾಡಿ ರೈಲ್ವೆ ಹಳಿಯ ಬಳಿ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು ಕೊಲೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶ ಸಮೀಪದಲ್ಲಿ ಯಲ್ಲಪ್ಪ(೪೭) ಎಂಬವರ ಮೃತದೇಹವು ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಸೀಳಿದ ಗಾಯ ಕಂಡುಬಂದಿದೆ. ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ಸಹಿತ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.