ನೆಲಮಂಗಲ: ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುವ ಬಹಳ ಪ್ರಕರಣಗಳ ನಡುವೆ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿರಳ ಪ್ರಕರಣವೊಂದು ನಡೆದಿದೆ. ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಿದರಕಲ್ಲು ನಿವಾಸಿ ಚಂದನಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಕ್ಕನಿಗೂ ಮದುವೆಯಾಗಿಲ್ಲ, ತನಗೂ ಮದುವೆ ಆಗಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ನೊಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಆದರೆ ಈ ಯುವತಿ ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಇದೊಂದು ರೈಲ್ವೆ ಕ್ರಾಸಿಂಗ್ನಲ್ಲಿ ಬರೀ ಕಚೋರಿಗಾಗಿ ರೈಲೇ ನಿಂತು ಬಿಡುತ್ತದೆ!