ಹುಟ್ಟುತ್ತಲೇ ತಾಯಿಯನ್ನು ಕಳೆದುಕೊಂಡ ಮಗ; ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಸಂಬಂಧಿಕರ ಆರೋಪ, ಪ್ರತಿಭಟನೆ

ಉಡುಪಿ: ಕಲಬುರಗಿಯ ಜಿಮ್ಸ್​ ಆಸ್ಪತ್ರೆಯಲ್ಲಿ ತಾಯಿ ಮತ್ತು ನವಜಾತ ಶಿಶು ಮೃತಪಟ್ಟಿರುವ ಘಟನೆಯ ಬೆನ್ನಿಗೇ ಮತ್ತೊಂದು ಅಂಥದ್ದೇ ಪ್ರಕರಣ ವರದಿಯಾಗಿದ್ದು, ಇದರಲ್ಲೂ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಉಡುಪಿಯ ಬಿ.ಆರ್. ಶೆಟ್ಟಿ ಉಚಿತ ಹೆರಿಗೆ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಕೋಟೇಶ್ವರದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಷಾ ಎಂಬಾಕೆ ಸಾವಿಗೀಡಾಗಿದ್ದಾರೆ. ಗಂಡು ಮಗುವಿಗೆ ಜನ್ಮವಿತ್ತ ಕೆಲವೇ ನಿಮಿಷಗಳಲ್ಲಿ ತಾಯಿ ಉಷಾ ಸಾವಿಗೀಡಾಗಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ … Continue reading ಹುಟ್ಟುತ್ತಲೇ ತಾಯಿಯನ್ನು ಕಳೆದುಕೊಂಡ ಮಗ; ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಸಂಬಂಧಿಕರ ಆರೋಪ, ಪ್ರತಿಭಟನೆ