ಬೆಂಗಳೂರು: ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ, ಸಿಗ್ನಲ್ ಜಂಪ್ ಮಾಡಿದ ಮಹಿಳೆಯೊಬ್ಬಳನ್ನು ಪ್ರಶ್ನಿಸಿದ್ದಕ್ಕೆ, ಆಕೆ ಪೊಲೀಸರ ಮೇಲೇ ಎಗರಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೊಲೀಸರ ಜತೆ ಮಹಿಳೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಉತ್ತರ ಪ್ರದೇಶ ಮೂಲದ ಅಪೂರ್ವಿ ಡಿಯಾಸ್ ಹೆಸರಿನ ಮಹಿಳೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಶನಿವಾರದಂದು ಸಿಗ್ನಲ್ ಜಂಪ್ ಮಾಡಿದ್ದಾಳೆ. ಆಗ ಅಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಎಎಸ್ಐ ಬಸವಯ್ಯ ಕಾರು ನಿಲ್ಲಿಸಿ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಕಟ್ಟುವಂತೆ ಕೇಳಿದ್ದಾರೆ. ಆದರೆ ಸಿಟ್ಟಿಗೆದ್ದ ಪೊಲೀಸರನ್ನು ಅವಾಚ್ಯವಾಗಿ ನಿಂದಿಸಲಾರಂಭಿಸಿದ್ದಾಳೆ. ಎಎಸ್ಐ ಕುತ್ತಿಗೆಪಟ್ಟಿ ಹಿಡಿದು ಎಳೆದಾಡಿ ಕಪಾಳಮೋಕ್ಷ ಮಾಡಿದ್ದಾಳೆ. ನಿಮ್ಮ ವಿರುದ್ಧ ನಾನು ಪೊಲೀಸ್ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕೂಗಾಡಿದ್ದಾಳೆ.
ಮಹಿಳೆ ಟ್ರಾಫಿಕ್ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸುತ್ತಿರುವು ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಮಹಿಳೆ ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಎಸ್ಐ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಎಫ್ಐಆರ್ ದಾಖಲಾಗಿದೆ.
ಸಿಗ್ನಲ್ ಜಂಪ್ ಮಾಡಿದ್ದಲ್ಲದೆ ಟ್ರಾಫಿಕ್ ಪೊಲೀಸರ ಮೇಲೆ ಎಗರಾಡಿ, ಕಪಾಳ ಮೋಕ್ಷ ಮಾಡಿದ ಮಹಿಳೆ!
ವಿವರಗಳಿಗೆ https://t.co/JCps2efeGV ನೋಡಿ#TrafficPolice #Bangalore #TrafficRules #UttarPradesh #MysoreBankCircle pic.twitter.com/SPOa2Gqw1V— Vijayavani (@VVani4U) March 7, 2021
ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದಿದ್ದು ಏಕೆ? ಆ ಪತ್ರದಲ್ಲಿ ಏನಿದೆ?
ಮಗಳ ಹೆಸರೇ ಮನೆಯ ಹೆಸರು! ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ಹೊಸ ವರಸೆ!