ನವದೆಹಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಪುತ್ರ ಆಶಿಷ್ ಮಿಶ್ರಾಗೆ ನೀಡಲಾಗಿದ್ದ ಜಾಮೀನನ್ನು ಸೋಮವಾರ ಹಿಂಪಡೆದಿರುವ ಸುಪ್ರೀಂಕೋರ್ಟ್ ವಾರದೊಳಗೆ ಶರಣಾಗುವಂತೆ ಸೂಚಿಸಿದೆ.
ಲಖಿಂಪುರ ಹಿಂಸೆ ಪ್ರಕರಣದಲ್ಲಿ ಆಶಿಷ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು. 4 ತಿಂಗಳ ಜೈಲುವಾಸ ಬಳಿಕ ಫೆ.10ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆಶಿಷ್ ಮಿಶ್ರಾ ಅವರ ತಂದೆ ಅಜಯ್ ಮಿಶ್ರಾ ಕೇಂದ್ರ ಸಚಿವರಾಗಿದ್ದು, ಉತ್ತರ ಪ್ರದೇಶದ ಬಿಜೆಪಿಯ ಪ್ರಭಾವಿ ರಾಜಕಾರಣಿ. ಕಳೆದ ವರ್ಷ ಅಕ್ಟೋಬರ್ 3 ರಂದು ಬಿಜೆಪಿ ಮುಖಂಡ ಕೇಶವ್ ಪ್ರಸಾದ್ ಮೌರ್ಯ ಅವರ ವಿರುದ್ಧ ರೈತರ ಗುಂಪೊಂದು ಪ್ರತಿಭಟನೆ ನಡೆಸಿತ್ತು. ಈ ವೇಳೆ ಕಾರೊಂದು ಪ್ರತಿಭಟನಾಕಾರರ ಮೇಲೆ ಹರಿದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದರು. ಆಕ್ರೋಶಗೊಂಡ ರೈತರು ಕಾರು ಚಾಲಕನನ್ನು ಹಿಡಿದು ಥಳಿಸಿದ್ದರು. ತೀವ್ರ ಗಾಯಗೊಂಡಿದ್ದ ಚಾಲಕ ಕೂಡ ಮೃತಪಟ್ಟಿದ್ದ ಈ ನಂತರ ಗಲಭೆ ಉಂಟಾಗಿತ್ತು.
ಹುಬ್ಬಳ್ಳಿ ಗಲಾಟೆ ಸಂಬಂಧ ಅಮಾಯಕರಿಗೆ ತೊಂದರೆ ಕೊಡಬೇಡಿ: ಪೊಲೀಸರಿಗೆ ಎಚ್ಡಿಕೆ ಮನವಿ